10:08 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು

23/05/2021, 16:07

ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಗದಗ ಸಮೀಪದ ಗ್ರಾಮವೊಂದರ ಸುಮಾರು 45ರ ಹರೆಯದ ಮಹಿಳೆಯೊಬ್ಬರು ತನಗೆ ಕೊರೊನಾ ಬರಬಹುದು ಎಂಬ ಭಯದಿಂದಲೇ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಕೊರೊನಾ ಪರೀಕ್ಷೆ ನಡೆಸುವಂತೆ ಪರಿಚಯಸ್ಥರು ಆಕೆಗೆ ಸಲಹೆ ನೀಡಿದ್ದರು. ಆದರೆ ಭಯಭೀತರಾದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ಲಿಂಗೇಗೌಡ (68) ಎಂಬವರು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

ಕೆಪಿಸಿ ನಿವೃತ್ತ ಉದ್ಯೋಗಿಯಾಗಿರುವ ಲಿಂಗೇಗೌಡ ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು