7:48 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು

23/05/2021, 16:07

ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜೆಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಗದಗ ಸಮೀಪದ ಗ್ರಾಮವೊಂದರ ಸುಮಾರು 45ರ ಹರೆಯದ ಮಹಿಳೆಯೊಬ್ಬರು ತನಗೆ ಕೊರೊನಾ ಬರಬಹುದು ಎಂಬ ಭಯದಿಂದಲೇ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಿಳೆ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಕೊರೊನಾ ಪರೀಕ್ಷೆ ನಡೆಸುವಂತೆ ಪರಿಚಯಸ್ಥರು ಆಕೆಗೆ ಸಲಹೆ ನೀಡಿದ್ದರು. ಆದರೆ ಭಯಭೀತರಾದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ಲಿಂಗೇಗೌಡ (68) ಎಂಬವರು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೆದರಿ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.

ಕೆಪಿಸಿ ನಿವೃತ್ತ ಉದ್ಯೋಗಿಯಾಗಿರುವ ಲಿಂಗೇಗೌಡ ಆರೋಗ್ಯ ಸರಿಯಿಲ್ಲದ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಲಿಂಗೇಗೌಡ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಚಾನಲ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು