11:03 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೊರೊನಾ ಭೀತಿ: ವ್ಯಾಕ್ಸಿನ್  ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ

31/05/2021, 15:06

ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ
info.reporterkarnataka@gmail.com

ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ  ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ   ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ಉಂಟಾಯಿತು.

ಕಳೆದ ಎರಡು ದಿನಗಳಿಂದ ನಾಲ್ಕು ನೂರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಹಾಕಲಾಗಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಪಾಲ್ಗೊಂಡು ವ್ಯಾಕ್ಸಿನ್ ಪಡೆಯುತ್ತಿದ್ದರು. ಆದರೆ ವ್ಯಾಕ್ಸಿನ್ ಕೊರತೆಯಿಂದ ಇಂದು ವ್ಯಾಕ್ಸಿನ್ ಪಡೆಯಲು ಬಂದಿದ್ದ ಸಾರ್ವಜನಿಕರಿಗೆ ನಿರಾಸೆಯಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಟಿ ಹೆಚ್ ಪ್ರಸನ್ನರವರು ಸಾವ೯ಜನಿಕರನ್ನು ಕುರಿತು ಮಾತನಾಡುತ್ತಾ ಈಗ ವ್ಯಾಕ್ಸಿನ್ ಗಳ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಹೆಚ್ಚು ವ್ಯಾಕ್ಸಿನ್ ಪೂರೈಕೆಯಾಗಲಿದ್ದು ಆಗ ಸಾರ್ವಜನಿಕರು ಒಂದು ವ್ಯಾಕ್ಸಿನ ಪಡೆಯಬಹುದು ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಚನ್ನಪ್ಪ ಹಾಗೂ ಆರೋಗ್ಯ ನೀರಿಕ್ಷಕರಾದ ಮಾರ್ತಿ,  ಸಿಬ್ಬಂದಿಗಳಾದ ನಾಗರಾಜು ಮೋಹನ್ ಆರೋಗ್ಯ ಸಹಾಯಕಿ ಪ್ರಮೀಳಾ ಹಾಗೂ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು