12:51 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ 6 ತಿಂಗಳೊಳಗೆ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ 

30/06/2021, 21:39

ನವದೆಹಲಿ(reporterkarnataka news): ಕೊರೊನಾದಿಂದ ಮೃತಪಟ್ಟವರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತಪಟ್ಟ ಪ್ರತಿ ಕುಟುಂಬಗಳಿಗೆ ಕನಿಷ್ಠ ಪರಿಹಾರ ಕೊಡುವ ವ್ಯವಸ್ಥೆಯನ್ನು 6 ತಿಂಗಳ ಒಳಗೆ ರೂಪಿಸಬೇಕೆಂದು

ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿದೆ.ಕೋವಿಡ್ ನಿಂದ ಮೃತ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದ ಹಿನ್ನೆಲೆಯಲ್ಲಿ ಎನ್‍ಡಿಎಂಎ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ) ಪ್ರತಿ ಕುಟುಂಬಕ್ಕೆ ಕನಿಷ್ಠ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನ 6 ತಿಂಗಳ ಒಳಗೆ ರೂಪಿಸಬೇಕು ಎಂದು ಸೂಚಿಸಿದೆ. 

ಕೊರೊನಾದಿಂದ ಮೃತರ ಕುಟುಂಬಕ್ಕೆ ವಿಪತ್ತು ಕಾಯ್ದೆಯಡಿ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳ ಲಾಗಿತ್ತು. ಇದೇ ಅರ್ಜಿಯಲ್ಲಿ ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರ ನೀಡುವ ವ್ಯವಸ್ಥೆಯ ಸರಳೀಕರಣದ ಬಗ್ಗೆ ಕೇಳಲಾಗಿತ್ತು. ಈ ಸಂಬಂಧ ನ್ಯಾಯಾಲಯ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ದೇಶದಲ್ಲಿ ಕೊರೊನಾದಿಂದ ಒಟ್ಟು 3,98,454 ಮಂದಿ ಮೃತಪಟ್ಟಿದ್ದಾರೆ. ಎನ್‍ಡಿಎಂಎ ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರಗಳನ್ನು ವಿತರಿಸಬೇಕು ಎಂದು ಸುಪ್ರೀಂಕೋರ್ಟ್  ನಿರ್ದೇಶನ ನೀಡಿದೆ. 

ಪರಿಹಾರ ನೀಡುವ ಬಗ್ಗೆ ಎನ್‍ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಮಾರ್ಗಸೂಚಿ ರೂಪಿಸುವಲ್ಲಿ ವಿಫಲವಾಗಿದೆ ಎಂದು ಎನ್‍ಡಿಎಂಗೆ ನ್ಯಾಯಾಲಯ ಚಾಟಿ ಬೀಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು