4:06 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ 6 ತಿಂಗಳೊಳಗೆ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ 

30/06/2021, 21:39

ನವದೆಹಲಿ(reporterkarnataka news): ಕೊರೊನಾದಿಂದ ಮೃತಪಟ್ಟವರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತಪಟ್ಟ ಪ್ರತಿ ಕುಟುಂಬಗಳಿಗೆ ಕನಿಷ್ಠ ಪರಿಹಾರ ಕೊಡುವ ವ್ಯವಸ್ಥೆಯನ್ನು 6 ತಿಂಗಳ ಒಳಗೆ ರೂಪಿಸಬೇಕೆಂದು

ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿದೆ.ಕೋವಿಡ್ ನಿಂದ ಮೃತ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದ ಹಿನ್ನೆಲೆಯಲ್ಲಿ ಎನ್‍ಡಿಎಂಎ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ) ಪ್ರತಿ ಕುಟುಂಬಕ್ಕೆ ಕನಿಷ್ಠ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನ 6 ತಿಂಗಳ ಒಳಗೆ ರೂಪಿಸಬೇಕು ಎಂದು ಸೂಚಿಸಿದೆ. 

ಕೊರೊನಾದಿಂದ ಮೃತರ ಕುಟುಂಬಕ್ಕೆ ವಿಪತ್ತು ಕಾಯ್ದೆಯಡಿ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳ ಲಾಗಿತ್ತು. ಇದೇ ಅರ್ಜಿಯಲ್ಲಿ ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರ ನೀಡುವ ವ್ಯವಸ್ಥೆಯ ಸರಳೀಕರಣದ ಬಗ್ಗೆ ಕೇಳಲಾಗಿತ್ತು. ಈ ಸಂಬಂಧ ನ್ಯಾಯಾಲಯ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ದೇಶದಲ್ಲಿ ಕೊರೊನಾದಿಂದ ಒಟ್ಟು 3,98,454 ಮಂದಿ ಮೃತಪಟ್ಟಿದ್ದಾರೆ. ಎನ್‍ಡಿಎಂಎ ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರಗಳನ್ನು ವಿತರಿಸಬೇಕು ಎಂದು ಸುಪ್ರೀಂಕೋರ್ಟ್  ನಿರ್ದೇಶನ ನೀಡಿದೆ. 

ಪರಿಹಾರ ನೀಡುವ ಬಗ್ಗೆ ಎನ್‍ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಮಾರ್ಗಸೂಚಿ ರೂಪಿಸುವಲ್ಲಿ ವಿಫಲವಾಗಿದೆ ಎಂದು ಎನ್‍ಡಿಎಂಗೆ ನ್ಯಾಯಾಲಯ ಚಾಟಿ ಬೀಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು