12:43 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು