4:49 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೊರೊನಾದಿಂದ ಸತ್ತವರು 30 ಸಾವಿರ ಅಲ್ಲ, 3 ಲಕ್ಷಕ್ಕೂ ಅಧಿಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್

20/07/2021, 17:53

ಮಂಗಳೂರು(reporterkarnataka): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯ ಕರ್ತರಿಗೆ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಸಲೀಂ ಅಹಮ್ಮದ್ ಹೇಳಿದರು.

ಅವರು  ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ಜುಲೈ 23ರಿಂದ 31ವರೆಗೆ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರುಗಳಿಗೆ ಪಕ್ಷ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ   ಸಭೆ ನಡೆಸಲಾಗುವುದು. ಆಗಸ್ಟ್ 23ಕ್ಕೆ ಮಂಗಳೂರಿಗೆ   ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಿ ಸಭೆಯ ನೇತೃತ್ವ ವಹಿಸಲಿದ್ದಾರೆ.ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,
ಹಾಲಿ ಮಾಜಿ, ಶಾಸಕರು, ಸಂಸದರು, ಜಿಲ್ಲಾವಾರು ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೊರೊನಾ 2ನೇ ಅಲೆಯ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರೂ ಬಿಜೆಪಿ ಸರ್ಕಾರ ಜನರ ಜೀವದ ಜತೆ ಚೆಲ್ಲಾಟವಾಡಿದೆ. ಸರಕಾರ ಕೊರೊನಾದಿಂದ ಸತ್ತವರಿಗೆ  ಪರಿಹಾರ ನಿಧಿ ಕೊಡಬೇಕಾದ್ದರಿಂದ ಸತ್ತವರು 30 ಸಾವಿರ ಎಂದು ಘೋಷಿಸಿದೆ. ಆದರೆ ಸತ್ತವರ ಸಂಖ್ಯೆ 3 ಲಕ್ಷಕ್ಕಿಂತ ಹೆಚ್ಚಿದೆ ಎಂದು ಆರೋಪಿಸಿದರು. ಈ ಬಗ್ಗೆ ಕಾಂಗ್ರೆಸ್ ಡೆತ್ ಸಮೀಕ್ಷೆ ನಡೆಸಲಿದೆ ಎಂದು ಹೇಳಿದರು. 

3ನೇ ಅಲೆಯ ಬರುತ್ತಿದೆ. ನಿಮ್ಮ ರಾಜಕೀಯ ಡೊಂಬರಾಟ ನಿಲ್ಲಿಸಿ ಜನರ ಪ್ರಾಣ ರಕ್ಷಿಸಿ ಎಂದು  ಬಿಜೆಪಿ ಸರಕಾರಕ್ಕೆ ಎಚ್ಚರಿಕೆ  ನೀಡುತ್ತಿದ್ದೇವೆ. ಎಂದರು. 

ಸಂಸದ ನಳಿನ್ ಕುಮಾರ್ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿ ಯು. ಟಿ. ಖಾದರ್ ಈ ಧ್ವನಿ ಅವರದಲ್ಲ ಎಂದು ಮುಖ್ಯ ಮಂತ್ರಿ ಪ್ರಮಾಣೀಕರಿಸಲಿ ಎಂದು ಕುಟುಕಿದರು. 

ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದ. ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹರೀಶ್ ಕುಮಾರ್, ಮಾಜಿ ಶಾಸಕ ಜೆ. ಆರ್. ಲೋಬೊ, ಯುತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು