12:39 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು