1:34 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು