5:23 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಕರ್ಫ್ಯೂ; ಆಟೋ, ಕಾರಿಗೆ ಅನುಮತಿ

21/01/2022, 23:18

ಚೆನ್ನೈ(reporterkarnataka.com):
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಮುಂದಿನ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ. 

ತಮಿಳುನಾಡು ಸರ್ಕಾರವು ಕಳೆದ ಕೂಡಾ ಭಾನುವಾರದಂದು ರಾಜ್ಯದಾದ್ಯಂತ ಸಂಪೂರ್ಣ ಕರ್ಫ್ಯೂ ವಿಧಿಸಿತ್ತು. ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ಕೊರೊನಾ ಮತ್ತು ಒಮೆಗಾ ವೈರಸ್‌ನ ಹಿನ್ನಲೆಯಿಂದ, ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜನವರಿ 23 ರ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುತ್ತದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ.

ಭಾನುವಾರದ ಪೂರ್ಣ ಕರ್ಫ್ಯೂ ದಿನದಂದು ಕಳೆದ ಭಾನುವಾರ (ಜನವರಿ16) ಪೂರ್ಣ ಕರ್ಫ್ಯೂ ಸಮಯದಲ್ಲಿ ಜಾರಿಗೊಳಿಸಲಾದ ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅನುಮತಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅಂದು ವಿಧಿಸಿದ್ದ ಚಟುವಟಿಕೆಗಳ ಮೇಲಿನ ನಿರ್ಬಂಧಗಳು ಈ ವಾರ ಕೂಡಾ ಮುಂದುವರಿಯಲಿವೆ ಎಂದು ಅದು ಹೇಳಿದೆ.

ಅಲ್ಲದೆ, ಬೇರೆ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಪ್ರಯಾಣಿಕರ ಹಿತದೃಷ್ಟಿಯಿಂದ, ಸಾಮಾನ್ಯ ಆಟೋಗಳು, ಬುಕ್ ಮಾಡಿರುವ ಬಾಡಿಗೆ ಕಾರುಗಳು ಚೆನ್ನೈ ಸೆಂಟ್ರಲ್, ಎಗ್ಮೋರ್ ರೈಲು ನಿಲ್ದಾಣ ಮತ್ತು ಕೊಯಮತ್ತೂರು ಬಸ್ ನಿಲ್ದಾಣದಂತಹ ಸ್ಥಳಗಳಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ.

ಇದು ಜಿಲ್ಲೆಯ ರೈಲು ನಿಲ್ದಾಣಗಳು ಮತ್ತು ಉಪನಗರ ಬಸ್ ನಿಲ್ದಾಣಗಳಿಗೆ ಮಾತ್ರ ಅನ್ವಯಿಸುತ್ತದೆ.

ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ವಾಲಿನ್‌ ಕೋರಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು