4:29 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ

14/01/2022, 15:10

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ.

ಮೈಸೂರು ನಗರ ಮತ್ತು ಮೈಸೂರು ತಾಲೂಕಿನಲ್ಲಿ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ.

ಜ.13 ರಿಂದ ಧಾರವಾಡ ನಗರ ಹಾಗೂ ಗ್ರಾಮೀಣ ಮತ್ತು ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ 1ರಿಂದ 8 ರ ವರೆಗಿನ ಭೌತಿಕ ತರಗತಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 1ರಿಂದ 9 ನೇ ತರಗತಿಗಳನ್ನು ಜನವರಿ 31 ರವರೆಗೆ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಜಿಲ್ಲಾಧಿಕಾರಿಗಳು ಆಯಾ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು