5:21 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್  420 ಎಂದು ರೇಣುಕಾಚಾರ್ಯ !!

27/05/2021, 19:10

ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಯೋಗೀಶ್ವರ್ ಅವರನ್ನು ಏಕವಚನದಲ್ಲಿ ನಿಂದಿಸಿ 420 ಎಂದು ಜರೆದಿದ್ದಾರೆ

ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ. ಅವನಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಹೀಗೆಲ್ಲ

ಬ್ಲಾಕ್ ಮೇಲ್ ಮಾಡಲು ಬಂದರೆ ನಾವು ಸುಮ್ಮನಿರಲ್ಲ. ಇಂಥವರಿಂದಲೇ ಪಕ್ಷಕ್ಕೆ ಧಕ್ಕೆಯಾಗುತ್ತದೆ. ಯಡಿಯೂರಪ್ಪನವರು ಆತನನ್ನು

ಸಚಿವನನ್ನಾಗಿ ಮಾಡಿದ್ದೇ ದೊಡ್ಡ ತಪ್ಪು ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಬಿಜೆಪಿ ಮೂರು ಭಾಗವಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಹೇಳಲು ಯೋಗೇಶ್ವರ್‌ಗೆ ಯಾವ ನೈತಿಕತೆಯೂ ಇಲ್ಲ. ಮೆಗಾಸಿಟಿ ಹಗರಣದಲ್ಲಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಗೃಹಸಚಿವ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.  ಮಂತ್ರಿ ಮಂಡಲದಿಂದ ವಜಾ ಮಾಡಲು ಕೂಡ ಆಗ್ರಹಿಸಿದರು.

ಯೋಗೇಶ್ವರ್ ಹಿಂಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾನೆ. 

ಕೊರೊನಾದಿಂದ ಜನರು ನೊಂದು, ಬೆಂದು ಹೋಗಿದ್ದಾರೆ. ಈ ಸಮಯದಲ್ಲಿ ದೆಹಲಿಗೇಕೆ ಹೋಗಬೇಕಿತ್ತು. ಯೋಗೇಶ್ವರ್ ದೆಹಲಿಯಲ್ಲಿ ಯಾವ ನಾಯಕ ರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಪೋಟೋ ತೆಗೆಸಿಕೊಂಡಿದ್ದಾನೆ. ಒಣ ರಾಜಕೀಯ ಬಿಟ್ಟು ಕ್ಷೇತ್ರದಲ್ಲಿ ಸಂಚರಿಸಿ ಕರೊನಾ ಜಾಗೃತಿ ಮಾಡಲಿ ಎಂದು ತಾಕೀತು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು