8:07 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್  420 ಎಂದು ರೇಣುಕಾಚಾರ್ಯ !!

27/05/2021, 19:10

ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಯೋಗೀಶ್ವರ್ ಅವರನ್ನು ಏಕವಚನದಲ್ಲಿ ನಿಂದಿಸಿ 420 ಎಂದು ಜರೆದಿದ್ದಾರೆ

ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ. ಅವನಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಹೀಗೆಲ್ಲ

ಬ್ಲಾಕ್ ಮೇಲ್ ಮಾಡಲು ಬಂದರೆ ನಾವು ಸುಮ್ಮನಿರಲ್ಲ. ಇಂಥವರಿಂದಲೇ ಪಕ್ಷಕ್ಕೆ ಧಕ್ಕೆಯಾಗುತ್ತದೆ. ಯಡಿಯೂರಪ್ಪನವರು ಆತನನ್ನು

ಸಚಿವನನ್ನಾಗಿ ಮಾಡಿದ್ದೇ ದೊಡ್ಡ ತಪ್ಪು ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಬಿಜೆಪಿ ಮೂರು ಭಾಗವಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಹೇಳಲು ಯೋಗೇಶ್ವರ್‌ಗೆ ಯಾವ ನೈತಿಕತೆಯೂ ಇಲ್ಲ. ಮೆಗಾಸಿಟಿ ಹಗರಣದಲ್ಲಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಗೃಹಸಚಿವ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.  ಮಂತ್ರಿ ಮಂಡಲದಿಂದ ವಜಾ ಮಾಡಲು ಕೂಡ ಆಗ್ರಹಿಸಿದರು.

ಯೋಗೇಶ್ವರ್ ಹಿಂಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾನೆ. 

ಕೊರೊನಾದಿಂದ ಜನರು ನೊಂದು, ಬೆಂದು ಹೋಗಿದ್ದಾರೆ. ಈ ಸಮಯದಲ್ಲಿ ದೆಹಲಿಗೇಕೆ ಹೋಗಬೇಕಿತ್ತು. ಯೋಗೇಶ್ವರ್ ದೆಹಲಿಯಲ್ಲಿ ಯಾವ ನಾಯಕ ರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಪೋಟೋ ತೆಗೆಸಿಕೊಂಡಿದ್ದಾನೆ. ಒಣ ರಾಜಕೀಯ ಬಿಟ್ಟು ಕ್ಷೇತ್ರದಲ್ಲಿ ಸಂಚರಿಸಿ ಕರೊನಾ ಜಾಗೃತಿ ಮಾಡಲಿ ಎಂದು ತಾಕೀತು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು