6:44 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ

03/06/2021, 16:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ  ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು.

ರಾಯಚೂರಿನ ಭಾರತೀಯ ಜೈನ ಸಂಘಟನೆಯು ರಾಯಚೂರು ಜಿಲ್ಲೆಯ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಆಕ್ಸಿಜನ್ ಮೆಷಿನ್ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ಸುಮಾರು 150 ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದಿದ್ದಾರೆ. ಮಸ್ಕಿ ತಾಲೂಕಿನ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಬಿಜೆಎಸ್ ನೇತೃತ್ವದಲ್ಲಿ ಮಸ್ಕಿಯ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಸಹಯೋಗದಲ್ಲಿ ಆಕ್ಸಿಜನ್ ಸೇವೆಯನ್ನು ಇಂದು ಮಸ್ಕಿಯ ಅನ್ನಪೂರ್ಣ ನರ್ಸಿಂಗ್ ಹೋಮ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೆರವೇರಿಸಲಾಯಿತು.

ಈಗಾಗಲೇ ಸಂಸ್ಥೆಯಿಂದ ಬಡ ಕುಟುಂಬಗಳು ಗುರುತಿಸಿ ಅವರಿಗೆ ಸಹಾಯ ಸಾಕಷ್ಟು ನೆರವು ನೀಡಿದೆ.  ಸಂಸ್ಥೆಯು ರಾಯಚೂರು ಜಿಲ್ಲೆ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ದಾರಿದೀಪವಾಗಿ ಕೆಲಸ ಮಾಡುತ್ತದೆ ಎಂದು ವೀರೇಶ್ ಹಿರೇಮಠ ತಿಳಿಸಿದರು.

 ಕಾರ್ಯಕ್ರಮದಲ್ಲಿ ಮಸ್ಕಿ ತಹಶೀಲ್ದಾರ್, ಬಲರಾಮ್ ಕಟ್ಟಿಮನಿ, ಪುರಸಭೆಯ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ  ಮತ್ತು  ಶ್ರೀ ಭ್ರಮರಾಂಬ ಸಹಕಾರಿಯ ಅಧ್ಯಕ್ಷರಾದ ಡಾ. ಶಿವಶರಣಪ್ಪ ಇತ್ಲಿ ಅವರು ಆಕ್ಸಿಜನ್ ಮಶೀನ್ ಬಟನ್ ಒತ್ತುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಹಕಾರಿಯ ಉಪಾಧ್ಯಕ್ಷರಾದ ಪಂಪಣ್ಣ ಗುಂಡಳ್ಳಿ, ನಿರ್ದೇಶಕರಾದ ಪ್ರಕಾಶ್ ದಾರಿವಾಲ್, ಡಾ. ಮಲ್ಲಿಕಾರ್ಜುನ್ ಇತ್ಲಿ ಇದ್ದರು. 
ಸಹಕಾರಿಯ ಪ್ರಧಾನ ವ್ಯವಸ್ಥಾಪಕರಾದ 
ವೀರೇಶ್ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ನಿರ್ದೇಶಕರು, ಸಲಹಾ ಸಮಿತಿಯ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು