5:32 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕಾಲದಲ್ಲಿ ಬಿಜೆಎಸ್ ನಿಂದ ಸಮಾಜಮುಖಿ ಕೆಲಸ: ವೀರೇಶ್ ಹಿರೇಮಠ ಸಂತಸ

03/06/2021, 16:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಭಾರತ ಜೈನ್ ಸಂಘಟನೆ ಸಮಾಜಕ್ಕೆ ಮಹತ್ತರ ಕೊಡುಗೆ  ನೀಡಿದೆ ಎಂದು ಮಸ್ಕಿ ಜಂಗಮ ಸಮಾಜದ ಯುವ ಮುಖಂಡ ವೀರೇಶ್ ಹಿರೇಮಠ ಹೇಳಿದರು.

ರಾಯಚೂರಿನ ಭಾರತೀಯ ಜೈನ ಸಂಘಟನೆಯು ರಾಯಚೂರು ಜಿಲ್ಲೆಯ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಆಕ್ಸಿಜನ್ ಮೆಷಿನ್ ಸೇವೆಯನ್ನು ಆರಂಭಿಸಿದ್ದು, ಈಗಾಗಲೇ ಸುಮಾರು 150 ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದಿದ್ದಾರೆ. ಮಸ್ಕಿ ತಾಲೂಕಿನ ಕೋವಿಡ್ 19 ಸೋಂಕಿತ ಜನರ ಅನುಕೂಲಕ್ಕಾಗಿ ಬಿಜೆಎಸ್ ನೇತೃತ್ವದಲ್ಲಿ ಮಸ್ಕಿಯ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಸಹಯೋಗದಲ್ಲಿ ಆಕ್ಸಿಜನ್ ಸೇವೆಯನ್ನು ಇಂದು ಮಸ್ಕಿಯ ಅನ್ನಪೂರ್ಣ ನರ್ಸಿಂಗ್ ಹೋಮ್ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೆರವೇರಿಸಲಾಯಿತು.

ಈಗಾಗಲೇ ಸಂಸ್ಥೆಯಿಂದ ಬಡ ಕುಟುಂಬಗಳು ಗುರುತಿಸಿ ಅವರಿಗೆ ಸಹಾಯ ಸಾಕಷ್ಟು ನೆರವು ನೀಡಿದೆ.  ಸಂಸ್ಥೆಯು ರಾಯಚೂರು ಜಿಲ್ಲೆ ಸೇರಿದಂತೆ ಸಂಕಷ್ಟದಲ್ಲಿರುವ ಜನರಿಗೆ ದಾರಿದೀಪವಾಗಿ ಕೆಲಸ ಮಾಡುತ್ತದೆ ಎಂದು ವೀರೇಶ್ ಹಿರೇಮಠ ತಿಳಿಸಿದರು.

 ಕಾರ್ಯಕ್ರಮದಲ್ಲಿ ಮಸ್ಕಿ ತಹಶೀಲ್ದಾರ್, ಬಲರಾಮ್ ಕಟ್ಟಿಮನಿ, ಪುರಸಭೆಯ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ  ಮತ್ತು  ಶ್ರೀ ಭ್ರಮರಾಂಬ ಸಹಕಾರಿಯ ಅಧ್ಯಕ್ಷರಾದ ಡಾ. ಶಿವಶರಣಪ್ಪ ಇತ್ಲಿ ಅವರು ಆಕ್ಸಿಜನ್ ಮಶೀನ್ ಬಟನ್ ಒತ್ತುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಹಕಾರಿಯ ಉಪಾಧ್ಯಕ್ಷರಾದ ಪಂಪಣ್ಣ ಗುಂಡಳ್ಳಿ, ನಿರ್ದೇಶಕರಾದ ಪ್ರಕಾಶ್ ದಾರಿವಾಲ್, ಡಾ. ಮಲ್ಲಿಕಾರ್ಜುನ್ ಇತ್ಲಿ ಇದ್ದರು. 
ಸಹಕಾರಿಯ ಪ್ರಧಾನ ವ್ಯವಸ್ಥಾಪಕರಾದ 
ವೀರೇಶ್ ಹಿರೇಮಠ ಅವರು ಕಾರ್ಯಕ್ರಮ ನಿರೂಪಿಸಿದರು. ಸಹಕಾರಿಯ ನಿರ್ದೇಶಕರು, ಸಲಹಾ ಸಮಿತಿಯ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು