8:25 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ

11/09/2021, 10:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರ‍ಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಗ್ರಹಿಸಿದ್ದಾರೆ. 

ಅವರು ಕೂಡ್ಲಿಗಿ ಘಟಕದ ಅಧಿಕಾರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ.

ಬಂಡೇ ಬಸಾಪುರ ತಾಂಡ ತಾಲೂಕು ಕೇಂದ್ರದಿಂದ ಸುಮಾರು 5 ಕಿಮೀ ದೂರದಲ್ಲಿದೆ. ಕೋವಿಡ್ ಸಂದರ್ಭ ಹೊರತುಪಡಿಸಿದಂತೆ ಬಸ್ ಸಂಪರ್ಕ ಗ್ರಾಮಕ್ಕೆ ಈವರೆಗೂ ಇತ್ತು, ಕೋವಿಡ್ ಲ‍ಾಕ್ ಡೌನ್ ನಿಂದಾಗಿ ರದ್ದಾಗಿದೆ. ನಂತರದ ದಿನಗಳಲ್ಲಿ ಮತ್ತೆ ಬಸ್ ಕಲ್ಪಿಸಿಲ್ಲ, ಇದರಿಂದಾಗಿ ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಮಕ್ಕಳು ಹಾಗೂ ಗರ್ಭಿಣಿಯರಿಗೆ, ರೈತರು ಮತ್ತು ಅನಾರೋಗ್ಯಕ್ಕೆ ತುತ್ತಾದವರಿಗೆ ಬಸ್ ಸೌಲಭ್ಯ ಅನಿವಾರ್ಯವಾಗಿದೆ. ಕಾರಣ ಗ್ರಾಮಕ್ಕೆ  ಶೀಘ್ರವಾಗಿ ಬಸ್ ಸೌಕರ್ಯ ಕಲ್ಪಿಸಬೇಕೆಂದು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಸಂಸ್ಥೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಕ.ರಾ.ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಎಂ.ಬಸವರಾಜ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ,ರೈತ ಮುಖಂಡರಾದ ಜಂಗಮ ಸೋವೇನಹಳ್ಳಿ ನಂದಿ ಜಂಬಣ್ಣ,  ಕೈವಲ್ಯಾಪುರ ವಿ.ನಾಗರಾಜ,ಬಿಬಿ ತಾಂಡದವರಾದಎಸ್.ಭಾಷಸಾಬ್,ಪಾಂಡುರಂಗನಾಯ್ಕ,ನಾರಾಯಣ ನಾಯ್ಕ, ನೇಮಿರಾಜನಾಯ್ಕ,ಕೆ.ನಿರಂಜನ,ಪಿ.ಭಾಷಾ ಸೇರಿದಂತೆ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು