9:49 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ

11/09/2021, 10:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರ‍ಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಗ್ರಹಿಸಿದ್ದಾರೆ. 

ಅವರು ಕೂಡ್ಲಿಗಿ ಘಟಕದ ಅಧಿಕಾರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ.

ಬಂಡೇ ಬಸಾಪುರ ತಾಂಡ ತಾಲೂಕು ಕೇಂದ್ರದಿಂದ ಸುಮಾರು 5 ಕಿಮೀ ದೂರದಲ್ಲಿದೆ. ಕೋವಿಡ್ ಸಂದರ್ಭ ಹೊರತುಪಡಿಸಿದಂತೆ ಬಸ್ ಸಂಪರ್ಕ ಗ್ರಾಮಕ್ಕೆ ಈವರೆಗೂ ಇತ್ತು, ಕೋವಿಡ್ ಲ‍ಾಕ್ ಡೌನ್ ನಿಂದಾಗಿ ರದ್ದಾಗಿದೆ. ನಂತರದ ದಿನಗಳಲ್ಲಿ ಮತ್ತೆ ಬಸ್ ಕಲ್ಪಿಸಿಲ್ಲ, ಇದರಿಂದಾಗಿ ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಮಕ್ಕಳು ಹಾಗೂ ಗರ್ಭಿಣಿಯರಿಗೆ, ರೈತರು ಮತ್ತು ಅನಾರೋಗ್ಯಕ್ಕೆ ತುತ್ತಾದವರಿಗೆ ಬಸ್ ಸೌಲಭ್ಯ ಅನಿವಾರ್ಯವಾಗಿದೆ. ಕಾರಣ ಗ್ರಾಮಕ್ಕೆ  ಶೀಘ್ರವಾಗಿ ಬಸ್ ಸೌಕರ್ಯ ಕಲ್ಪಿಸಬೇಕೆಂದು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಸಂಸ್ಥೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಕ.ರಾ.ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಎಂ.ಬಸವರಾಜ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ,ರೈತ ಮುಖಂಡರಾದ ಜಂಗಮ ಸೋವೇನಹಳ್ಳಿ ನಂದಿ ಜಂಬಣ್ಣ,  ಕೈವಲ್ಯಾಪುರ ವಿ.ನಾಗರಾಜ,ಬಿಬಿ ತಾಂಡದವರಾದಎಸ್.ಭಾಷಸಾಬ್,ಪಾಂಡುರಂಗನಾಯ್ಕ,ನಾರಾಯಣ ನಾಯ್ಕ, ನೇಮಿರಾಜನಾಯ್ಕ,ಕೆ.ನಿರಂಜನ,ಪಿ.ಭಾಷಾ ಸೇರಿದಂತೆ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು