10:55 PM Friday12 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು