1:33 PM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು