10:04 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊರೊನಾ ನಿಯಮಾನುಸಾರ ಗುತ್ತಿಗೆ ಹೊರಗುತ್ತಿಗೆ ಕೊರೊನಾ ವಾರಿಯರ್ಸ್‌ಗಳಿಗೆ ಪರಿಹಾರ ನೀಡಬೇಕಾಗಿ ಮನವಿ

08/05/2021, 14:59

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ(Reporter Karnataka News): ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಈಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಅವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಇದರಿಂದ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಅವರ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಕೊರೊನಾ ಸಂಕಷ್ಟದ ನಡುವೆ ಕೊರೊನಾ ವಾರಿಯರ್ಸ್ ಸೇವೆಗೆ ಹೆಚ್ಚಿನ ಮಹತ್ವವಿದೆ. ಮನವಿ ಪತ್ರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸರ್ಕಾರದ ನಿಯಮಾನುಸಾರ ಪರಿಹಾರ ಕೊಡಿಸಲು ಪ್ರಾಮಾನಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ, ಸಿಇಒ ರಾಜೇಶ್ವರಿ, ಸ್ಥಳೀಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ನಾಗೇಶ್, ಸಂತೊಷ್, ಟಿ.ವಿ.ಸುರೇಶ್ ಬಾಬು, ಸುರೇಶ್, ಶ್ರೀನಾಥ್, ಬಾಬು ಪ್ರಮೋದ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು