3:00 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕೊರೊನಾ ನಿಯಂತ್ರಣ: ಮಾರ್ಚ್ 27 ರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭ

09/03/2022, 16:26

ಹೊಸದಿಲ್ಲಿ(reporterkarnataka.com):ಅಂತಾರಾಷ್ಟ್ರೀಯ ವಿಮಾನ ಯಾನ  ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, ನಿಯಮಿತ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿವೆ.

ಇನ್ನು ವಿದೇಶಿ ಆಗಮನ ಮತ್ತು ನಿರ್ಗಮನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಪರಿಣಾಮಕಾರಿಯಾದ ಪ್ರಮಾಣಿತ ಕಾರ್ಯಾಚರಣೆ ಕಾರ್ಯವಿಧಾನಗಳನ್ನು ಅನುಸರಿಸಲಿವೆ’ ಎಂದಿದೆ.

ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ವೈರಸ್ ನಿಂದಾಗಿ ಎರಡು ವರ್ಷಗಳ ವಿರಾಮದ ನಂತರ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಪುನರಾರಂಭಿಸುವ ನಿರ್ಧಾರವನ್ನು ನಾಗರಿಕ ವಿಮಾನಯಾನ ಸಚಿವಾಲಯ ತೆಗೆದುಕೊಂಡಿದೆ.

ಅಂದ್ಹಾಗೆ, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಆದಾಗ್ಯೂ, ಜುಲೈ 2020 ರಿಂದ ಭಾರತ ಮತ್ತು ಸುಮಾರು 40 ದೇಶಗಳ ನಡುವೆ ಬಯೋ ಬಬ್ಬಲ್‌ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕರ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು