5:22 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊರೊನಾ ನಿಯಂತ್ರಣಕ್ಕ ಏನೇನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳಲಿ, ಕಾಂಗ್ರೆಸ್ ಬೆಂಬಲ ಸದಾ ಇದೆ:  ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ 

21/05/2021, 22:33

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಕೋಲಾರ( reporterkarnataka news) :ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಏನೇನು ಕ್ರಮ ಕೈಗೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಲಿ, ಸರ್ಕಾರ ಮತ್ತು ಜಿಲ್ಲಾಡಳಿತ ರೋಗ ನಿಯಂತ್ರಣಕ್ಕೆ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಸದಾ ಬೆಂಬಲ ನೀಡುತ್ತದೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. 

ಶುಕ್ರವಾರ ನಗರದ ಪ್ರವಾಸಿ ಮಂದಿರ ಮುಂಭಾಗ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಒದಗಿಸಿರುವ ಎರಡು ಅಂಬುಲೆನ್ಸ್ ನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಏನೇನು ಕ್ರಮ ಕೈಗೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಲಿ, ಸರ್ಕಾರ ಮತ್ತು ಜಿಲ್ಲಾಡಳಿತದ ಜತೆ ಕಾಂಗ್ರೆಸ್ ಇರುತ್ತದೆ ಎಂದು ನುಡಿದರು. ಲಾಕ್‍ಡೌನ್ ಜಾರಿಗೊಳಿ ಸಿದ್ದರೂ ಕರೊನಾ ನಿಯಂತ್ರಣಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಅವರು, ಪಕ್ಷದಿಂದ ಇನ್ನೂ ಹೆಚ್ಚಿನ ಸಹಕಾರ ನೀಡಲು ಸಿದ್ದರಿದ್ದೇವೆ. ಮೆಡಿಸಿನ್ ಕಿಟ್ ಸೇರಿದಂತೆ ಸಂದರ್ಭ ಬಂದಾಗ ಜಿಲ್ಲಾಡಳಿತದ ಜತೆಗೆ ಚರ್ಚಿಸಿ ಇನ್ನಷ್ಟು ಸೌಲಭ್ಯ ಕೊಡಲು ರೆಡಿ ಎಂದರು.

ಅಂಬುಲೆನ್ಸ್ ಹಾಗೂ ಮೆಡಿಸಿನ್ ಕಿಟ್‍ನ್ನು ಹಸ್ತಾಂತರಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಹಾಗೂ ಒಲಂಪಿಕ್ ಸಮಿತಿ ಅಧ್ಯಕ್ಷ ಗೋವಿಂದರಾಜು, ನಮ್ಮ ಸೇವೆಯನ್ನು ಉಪ ಯೋಗಿಸಿಕೊಳ್ಳಲು ಜಿಲ್ಲಾಧಿಕಾ ರಿಗಳು ಮುಂದೆ ಬಂದಿರುವುದರಿ ಂದ ಇನ್ನಷ್ಟು ಸೇವೆ ಮಾಡಲು ಉತ್ತೇಜನ ಸಿಕ್ಕಿದೆ ಎಂದರು.ಸಾರ್ವಜನಿಕರು ಕಾರ್ಮಿಕರು, ಬಡವರಿಗೆ ಅನುಕೂಲವಾಗುವ ದೃಷ್ಠಿಯಿಂದ ಅಂಬುಲೆನ್ಸ್ ಸೇವೆ ಒದಗಿಸಲಾಗಿದೆ. ಸಂದರ್ಭ ಬಂದಾಗ ನಾಗರಿಕರು ಸೇವೆಯನ್ನು ಬಳ ಸಿಕೊಳ್ಳಬೇಕು ಹಾಗೂ ಸರ್ಕಾರದ ಆದೇಶ ಪಾಲಿಸುವ ಮೂಲಕ ಕರೊನಾ ನಿಯಂತ್ರಣಕ್ಕೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

ಅಂಬ್ಯುಲೆನ್ಸ್‍ಗಳನ್ನು ಸ್ವೀಕರಿ ಸಿದ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಮಾತನಾಡಿ, ಎಂಎ ಲ್‍ಸಿ ಗೋವಿಂದರಾಜು ಅವರು 24/7ಉಚಿತ ಸೇವೆಯ 2 ಆಂಬ್ಯುಲೆನ್ಸ್‍ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿ ಧನ್ಯವಾದ ಸಲ್ಲಿಸಿದರು.ನಮ್ಮಲ್ಲಿ 67 ಆಂಬ್ಯುಲೆ ನ್ಸ್‍ಗಳಿದ್ದು, ಇವುಗಳನ್ನು ಒಳಗೊ ಂಡಂತೆ ಕೋವಿಡ್ ನಿರ್ವಹಣೆಗೆ ಬಳಸಿಕೊಳ್ಳುತ್ತೇವೆ. ಕೋವಿಡ್ ರೋಗಿಗಳನ್ನು ಕರೆದುಕೊಂಡು ಬರುವುದಕ್ಕೆ ಸೇರಿದಂತೆ ಎಲ್ಲ ಕೆಲಸಗಳಿಗೆ ಬಳಸಿಕೊಳ್ಳಲಾ ಗುವುದು. ಇವುಗಳನ್ನು ಡಿಜಿಟಲ್ ನರ್ವ್ ಸೆಂಟರ್‍ಗೆ ಲಿಂಕ್ ಮಾಡಿ ಜನರಿಗೆ ಸೇವೆ ನೀಡಲಾಗುವುದು ಎಂದು ಹೇಳಿದರು.

ಆಂಬ್ಯುಲೆನ್ಸ್ ಜತೆಗೆ ಮೆಡಿ ಸಿನ್, ಮಾಸ್ಕ್‍ಗಳನ್ನು ವಿತರಣೆ ಮಾಡಲಾಗಿದೆ. ಮೆಡಿಸಿನ್ ಬಹಳ ಅವಶ್ಯಕೆತಯಿದ್ದು, ಎ ಸಿಂತೆ ಮೆಟಿಕ್, ಹೋಂ ಐಸೋಲೇ ಷನ್, ಪ್ರಾಥಮಿಕ ಹಂತದಲ್ಲಿ ರುವವರಿಗೆ ಕೊಡಲಾಗುತ್ತಿದ್ದು, ಅದಕ್ಕೂ ಉಪಯೋಗವಾಗುತ್ತಿದೆ. ಎಲ್ಲವನ್ನು ಬಳಸಿಕೊಳ್ಳ ಲಾಗುª ÀÅದಾಗಿ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷಾ ್ಠಧಿಕಾರಿ ಕಾರ್ತಿಕ್‍ರೆಡ್ಡಿ ಮಾತನಾಡಿ, ಜಿಲ್ಲಾಡಳಿತಕ್ಕೆ ಆಕ್ಸಿಜನ್ ಸಹಿತ 2 ಆಂಬ್ಯುಲೆನ್ಸ್‍ಗಳನ್ನು ನೀಡಿದ್ದಾರೆ. ನಾಗರೀಕರಿಗೆ ಉಚಿತ ಸೇವೆ ಇರುತ್ತದೆ.

ಈ ವಾಹನಗಳ ಚಾಲಕರ ಮೊಬೈಲ್ ಸಂಖ್ಯೆಯನ್ನು ಆಸ್ಪತ್ರೆ ಮತ್ತು ಡಿಜಿಟಲ್ ನರ್ವ್ ಸೆಂಟ ರ್‍ಗೆ ಲಿಂಕ್ ಮಾಡಲಾಗುವುದು. 24 ಗಂಟೆಯೂ ಇವುಗಳ ಸೇವೆ ಇರುವವುದರಿಂದ ಜನರು ಬಳಸಿ ಕೊಳ್ಳಬೇಕೆಂದು ಕೋರಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಚಂ ದ್ರಾರೆಡ್ಡಿ ಮಾತನಾಡಿ, ಪಕ್ಷದಿಂದ ಈಗಾಗಲೇ 4 ಆಂಬ್ಯುಲೆನ್ಸ್‍ಗಳನ್ನು ನೀಡಿದ್ದು, ಈಗ 2 ನೀಡುತ್ತಿದ್ದೇವೆ. ಮುಂದೆಯೂ 2 ಆಂಬ್ಯುಲೆನ್ಸ್ ನೀಡುತ್ತೇವೆ. ಅಲ್ಲದೆ ಚಿರಶಾಂತಿಯ 2 ವಾಹನಗಳನ್ನು ನೀಡಿದ್ದು, ಪುನಃ ಒಂದು ವಾಹನ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್, ಕಾಂಗ್ರೆಸ್ ಎಸ್ಸಿಘಟ ಕದ ಜಿಲ್ಲಾಧ್ಯಕ್ಷ ಕೆ.ಜಯದೇವ್, ಬೆಂಗಳೂರು ಉತ್ತರ ವಿವಿ ಸಿಂಡಿ ಕೇಟ್ ಸದಸ್ಯ ಎಂ.ವಿ.ರಂಗಪ್ಪ, ಬೆಂಗಳೂರಿನ ಎಸ್‍ಐಐಪಿ ವೈದ್ಯ ಡಾ.ಪರಮೇಶ್ವರ್ ಸಿ.ಎಂ., ಕಾಂ ಗ್ರೆಸ್ ಮುಖಂಡ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು