4:16 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಕೊರೊನಾ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಿಸಿ: ಫೀಲ್ಡಿಗಿಳಿದ ಖಾಕಿ ಪಡೆ; ಎಲ್ಲೆಡೆ ಭಾರಿ ತಪಾಸಣೆ

08/01/2022, 13:43

ಬೆಂಗಳೂರು/ಮಂಗಳೂರು(reporterkarnataka.con): ಒಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು, ಕಡಲನಗರಿ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿನ್ನೆ ರಾತ್ರಿಯಿಂದಲೇ ಪೊಲೀಸರು ಫೀಲ್ಡ್‌ಗಿಳಿದಿದ್ದು, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಮತೆ ಹಲವು ನಗರಗಳ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಅನಗತ್ಯವಾಗಿ ರಸ್ತೆಗೆ ಬರುವ ಜನರ ವಿಚಾರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿ, ಕಡಲನಗರಿ, ಸಾಂಸ್ಕೃತಿಕ ನಗರಿಯ ರಸ್ತೆಗಳು ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿವೆ.

ರಾಜ್ಯದ ಕೆಲವು ನಗರಗಳಲ್ಲಿ ವೀಕೆಂಡ್ ಕರ್ಫ್ಯೂಗೆ ಬೆಲೆ ಕೊಡದೆ ಜನ ತಮ್ಮ ಪಾಡಿಗೆ ತಾವು ಓಡಾಡಿಕೊಂಡಿದ್ದಾರೆ. ಮೈಸೂರಿನ ದೊಡ್ಡ ಕೆರೆ ಕ್ರೀಡಾಂಗಣದಲ್ಲಿ ಯುವಕರು ಕರ್ಫ್ಯೂ ಮರೆತು ಕ್ರಿಕೆಟ್ ಆಡುತ್ತಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಎಚ್ಚರಿಕೆ ನೀಡಿ ಎಲ್ಲರನ್ನು ಮನೆಗೆ ಕಳಿಸಿದ್ದಾರೆ. ಕೊಪ್ಪಳದಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ತಲೆಕೆಡಿಸಿಕೊಳ್ಳದ ಜನ ಸಾಮೂಹಿಕವಾಗಿ ನಿಂತು ಟೀ ಸೇವಿಸುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಬಿಎಂಟಿಸಿ ಓಡಾಟ ದೈನಂತಿನಂತೆ ಇರೋದಿಲ್ಲ. ಶೇ.10ರಷ್ಟು ಬಸ್‌ಗಳು ಮಾತ್ರ ರಸ್ತೆಗಿಳಿಯಲಿವೆ. ಕರ್ಫ್ಯೂ ಸಮಯದಲ್ಲಿ ಓಡಾಟ ನಡೆಸಲು ಅನುಮತಿ ಇರುವವರು ಬಸ್‌ಗಾಗಿ ಕಾಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ.


ಅಂತಾರಾಜ್ಯ ಬಸ್ ಓಡಾಟಕ್ಕೆ ನಿರ್ಬಂಧ ಇಲ್ಲ. ಆದರೆ ಗೋವಾ, ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರ ಬಳಿ ಆರ್‌ಟಿಪಿಸಿಆರ್ ವರದಿ ಇರುವುದು ಕಡ್ಡಾಯ. ಇಲ್ಲವಾದರೆ ಬಸ್‌ಗೆ ಪ್ರವೇಶ ಇರುವುದಿಲ್ಲ. ಮೆಟ್ರೋ ಸಂಚಾರ ಎಂದಿನಂತೆ ಇದ್ದು, 20 ನಿಮಿಷಕ್ಕೊಂದು ಮೆಟ್ರೋ ಬರಲಿದೆ. ಬೆಳಗ್ಗೆ 8 ರಿಂದ ರಾತ್ರಿ 9 ರವರೆಗೆ ಮಾತ್ರ ಮೆಟ್ರೋ ಸೇವೆ ಲಭ್ಯವಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು