12:41 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕೊರೊನಾ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಿಸಿ: ಫೀಲ್ಡಿಗಿಳಿದ ಖಾಕಿ ಪಡೆ; ಎಲ್ಲೆಡೆ ಭಾರಿ ತಪಾಸಣೆ

08/01/2022, 13:43

ಬೆಂಗಳೂರು/ಮಂಗಳೂರು(reporterkarnataka.con): ಒಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು, ಕಡಲನಗರಿ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿನ್ನೆ ರಾತ್ರಿಯಿಂದಲೇ ಪೊಲೀಸರು ಫೀಲ್ಡ್‌ಗಿಳಿದಿದ್ದು, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಮತೆ ಹಲವು ನಗರಗಳ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಅನಗತ್ಯವಾಗಿ ರಸ್ತೆಗೆ ಬರುವ ಜನರ ವಿಚಾರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿ, ಕಡಲನಗರಿ, ಸಾಂಸ್ಕೃತಿಕ ನಗರಿಯ ರಸ್ತೆಗಳು ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿವೆ.

ರಾಜ್ಯದ ಕೆಲವು ನಗರಗಳಲ್ಲಿ ವೀಕೆಂಡ್ ಕರ್ಫ್ಯೂಗೆ ಬೆಲೆ ಕೊಡದೆ ಜನ ತಮ್ಮ ಪಾಡಿಗೆ ತಾವು ಓಡಾಡಿಕೊಂಡಿದ್ದಾರೆ. ಮೈಸೂರಿನ ದೊಡ್ಡ ಕೆರೆ ಕ್ರೀಡಾಂಗಣದಲ್ಲಿ ಯುವಕರು ಕರ್ಫ್ಯೂ ಮರೆತು ಕ್ರಿಕೆಟ್ ಆಡುತ್ತಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಎಚ್ಚರಿಕೆ ನೀಡಿ ಎಲ್ಲರನ್ನು ಮನೆಗೆ ಕಳಿಸಿದ್ದಾರೆ. ಕೊಪ್ಪಳದಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ತಲೆಕೆಡಿಸಿಕೊಳ್ಳದ ಜನ ಸಾಮೂಹಿಕವಾಗಿ ನಿಂತು ಟೀ ಸೇವಿಸುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಬಿಎಂಟಿಸಿ ಓಡಾಟ ದೈನಂತಿನಂತೆ ಇರೋದಿಲ್ಲ. ಶೇ.10ರಷ್ಟು ಬಸ್‌ಗಳು ಮಾತ್ರ ರಸ್ತೆಗಿಳಿಯಲಿವೆ. ಕರ್ಫ್ಯೂ ಸಮಯದಲ್ಲಿ ಓಡಾಟ ನಡೆಸಲು ಅನುಮತಿ ಇರುವವರು ಬಸ್‌ಗಾಗಿ ಕಾಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ.


ಅಂತಾರಾಜ್ಯ ಬಸ್ ಓಡಾಟಕ್ಕೆ ನಿರ್ಬಂಧ ಇಲ್ಲ. ಆದರೆ ಗೋವಾ, ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರ ಬಳಿ ಆರ್‌ಟಿಪಿಸಿಆರ್ ವರದಿ ಇರುವುದು ಕಡ್ಡಾಯ. ಇಲ್ಲವಾದರೆ ಬಸ್‌ಗೆ ಪ್ರವೇಶ ಇರುವುದಿಲ್ಲ. ಮೆಟ್ರೋ ಸಂಚಾರ ಎಂದಿನಂತೆ ಇದ್ದು, 20 ನಿಮಿಷಕ್ಕೊಂದು ಮೆಟ್ರೋ ಬರಲಿದೆ. ಬೆಳಗ್ಗೆ 8 ರಿಂದ ರಾತ್ರಿ 9 ರವರೆಗೆ ಮಾತ್ರ ಮೆಟ್ರೋ ಸೇವೆ ಲಭ್ಯವಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು