12:52 PM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊರೊನಾ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಿಸಿ: ಫೀಲ್ಡಿಗಿಳಿದ ಖಾಕಿ ಪಡೆ; ಎಲ್ಲೆಡೆ ಭಾರಿ ತಪಾಸಣೆ

08/01/2022, 13:43

ಬೆಂಗಳೂರು/ಮಂಗಳೂರು(reporterkarnataka.con): ಒಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು, ಕಡಲನಗರಿ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿನ್ನೆ ರಾತ್ರಿಯಿಂದಲೇ ಪೊಲೀಸರು ಫೀಲ್ಡ್‌ಗಿಳಿದಿದ್ದು, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಮತೆ ಹಲವು ನಗರಗಳ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಅನಗತ್ಯವಾಗಿ ರಸ್ತೆಗೆ ಬರುವ ಜನರ ವಿಚಾರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿ, ಕಡಲನಗರಿ, ಸಾಂಸ್ಕೃತಿಕ ನಗರಿಯ ರಸ್ತೆಗಳು ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿವೆ.

ರಾಜ್ಯದ ಕೆಲವು ನಗರಗಳಲ್ಲಿ ವೀಕೆಂಡ್ ಕರ್ಫ್ಯೂಗೆ ಬೆಲೆ ಕೊಡದೆ ಜನ ತಮ್ಮ ಪಾಡಿಗೆ ತಾವು ಓಡಾಡಿಕೊಂಡಿದ್ದಾರೆ. ಮೈಸೂರಿನ ದೊಡ್ಡ ಕೆರೆ ಕ್ರೀಡಾಂಗಣದಲ್ಲಿ ಯುವಕರು ಕರ್ಫ್ಯೂ ಮರೆತು ಕ್ರಿಕೆಟ್ ಆಡುತ್ತಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಎಚ್ಚರಿಕೆ ನೀಡಿ ಎಲ್ಲರನ್ನು ಮನೆಗೆ ಕಳಿಸಿದ್ದಾರೆ. ಕೊಪ್ಪಳದಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ತಲೆಕೆಡಿಸಿಕೊಳ್ಳದ ಜನ ಸಾಮೂಹಿಕವಾಗಿ ನಿಂತು ಟೀ ಸೇವಿಸುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಬಿಎಂಟಿಸಿ ಓಡಾಟ ದೈನಂತಿನಂತೆ ಇರೋದಿಲ್ಲ. ಶೇ.10ರಷ್ಟು ಬಸ್‌ಗಳು ಮಾತ್ರ ರಸ್ತೆಗಿಳಿಯಲಿವೆ. ಕರ್ಫ್ಯೂ ಸಮಯದಲ್ಲಿ ಓಡಾಟ ನಡೆಸಲು ಅನುಮತಿ ಇರುವವರು ಬಸ್‌ಗಾಗಿ ಕಾಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ.


ಅಂತಾರಾಜ್ಯ ಬಸ್ ಓಡಾಟಕ್ಕೆ ನಿರ್ಬಂಧ ಇಲ್ಲ. ಆದರೆ ಗೋವಾ, ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರ ಬಳಿ ಆರ್‌ಟಿಪಿಸಿಆರ್ ವರದಿ ಇರುವುದು ಕಡ್ಡಾಯ. ಇಲ್ಲವಾದರೆ ಬಸ್‌ಗೆ ಪ್ರವೇಶ ಇರುವುದಿಲ್ಲ. ಮೆಟ್ರೋ ಸಂಚಾರ ಎಂದಿನಂತೆ ಇದ್ದು, 20 ನಿಮಿಷಕ್ಕೊಂದು ಮೆಟ್ರೋ ಬರಲಿದೆ. ಬೆಳಗ್ಗೆ 8 ರಿಂದ ರಾತ್ರಿ 9 ರವರೆಗೆ ಮಾತ್ರ ಮೆಟ್ರೋ ಸೇವೆ ಲಭ್ಯವಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು