10:21 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೊರೊನಾ ಸಂಕಷ್ಟ: ನೊಂದ ಬಡ ಕುಟುಂಬಗಳ ಜತೆ ನಿಂತ ಮಸ್ಕಿಯ ಅಭಿನಂದನ್ ಸಂಸ್ಥೆ

19/05/2021, 15:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದೆ.

ಈ ಅಭಿಯಾನದ ಮೂಲಕ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ನೀಡುವ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಗೆ ಬುಧವಾರದಂದು ಮಸ್ಕಿಯ ತಹಸಿಲ್ದಾರ್ ಬಲರಾಮ್ ಕಟ್ಟಿಮನಿ ಹಾಗೂ ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್ ಅವರಿಂದ ಚಾಲನೆ ನೀಡಿದರು. ಈ ಸಂದರ್ಭದಲ್ಲಿ

ಮಾತನಾಡಿದ ತಹಸಿಲ್ದಾರ್ ಬಲರಾಮ್ ಕಟ್ಟಿಮನಿ ಅವರು ಅಭಿನಂದನ್ ಸಂಸ್ಥೆಯು ಕಳೆದ ವರ್ಷವೂ ಆಗಿದ್ದಂತಹ ಲಾಕ್ ಡೌನ್ ನಲ್ಲಿ ಸಾವಿರಾರು ಬಡ ಕುಟುಂಬಗಳಿಗೆ ಆಹಾರ ದಾನ್ಯಗಳನ್ನು ಹಾಗೂ ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಿದ್ದು, ಅದೇ ರೀತಿಯಾಗಿ ಈ ಬಾರಿಯ ಲಾಕ್ ಡೌನ್ ನಿಂದಾಗಿ ಕಂಗಾಲಾದ ಕುಟುಂಬಗಳಿಗೆ ನೀಡುತ್ತಿರುವುದು ಶ್ಲಾಘನೆಯ ಕಾರ್ಯ.  ಸಂಸ್ಥೆಯ ಎಲ್ಲಾ ಕಾರ್ಯಗಳಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.  ಈ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಜೀವಗಳಿಗೆ ವೈಧ್ಯಕೀಯ ಚಿಕಿತ್ಸೆ ಕೊಡಿಸಲು ಸಂಸ್ಥೆಯು ಒಪ್ಪಿಕೊಂಡಿತು.  

ಪುರಸಭೆಯ ಮುಖ್ಯ ಅಧಿಕಾರಿ ಹನುಮಂತಮ್ಮ ನಾಯಕ್, ಸಿರಸ್ತೇದಾರ ಅಕ್ತರ್, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಬಸವರಾಜ ಸ್ವಾಮಿ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಮಂಜುನಾಥ ಮಸ್ಕಿ, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು