7:58 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು