10:56 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು