10:04 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು