5:22 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ‌ ಮಾಡೋಣ: ಶಾಸಕ‌ ವೇದವ್ಯಾಸ ಕಾಮತ್

27/05/2021, 18:52

ಮಂಗಳೂರು(reporterkarnataka news):

ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇಂದ್ರದಲ್ಲಿ ಸಂಬಂಧಪಟ್ಟ‌ ವಾರ್ಡ್`ಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ನಿಯಂತ್ರಣಕ್ಕಾಗಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತಿದ್ದಾರೆ. ಸೋಂಕಿತರ ಆರೋಗ್ಯದ ಕುರಿತು ಕಾಳಜಿ ವಹಿಸುವ, ಮಾಹಿತಿ ಪಡೆಯುವ ಕೆಲಸವನ್ನು ಮಾಡುತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದರು. 

ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕಿನ‌ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೊಳಪಡುವಂತೆ ಅವರಲ್ಲಿ ಮನವಿ ಮಾಡಿಕೊಳ್ಳಬೇಕು. ರೋಗ ಉಲ್ಬಣಗೊಂಡು ಪರಿಸ್ಥಿತಿ ಕೈ ಮೀರುವ ಹಂತದ ವರೆಗೂ ಕಾಯಬಾರದು. ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದರೊಂದಿಗೆ ಡೆಂಗ್ಯೂ, ಮಲೇರಿಯಾ ರೋಗದ ಕುರಿತು ಗಮನ ನೀಡಬೇಕು. ಸೊಳ್ಳೆ ಪರದೆ ವಿತರಣೆ ಅಥವ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ., ಜಯಶ್ರೀ ಕುಡ್ವ, ಬಂದರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು