12:15 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ‌ ಮಾಡೋಣ: ಶಾಸಕ‌ ವೇದವ್ಯಾಸ ಕಾಮತ್

27/05/2021, 18:52

ಮಂಗಳೂರು(reporterkarnataka news):

ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇಂದ್ರದಲ್ಲಿ ಸಂಬಂಧಪಟ್ಟ‌ ವಾರ್ಡ್`ಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ನಿಯಂತ್ರಣಕ್ಕಾಗಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತಿದ್ದಾರೆ. ಸೋಂಕಿತರ ಆರೋಗ್ಯದ ಕುರಿತು ಕಾಳಜಿ ವಹಿಸುವ, ಮಾಹಿತಿ ಪಡೆಯುವ ಕೆಲಸವನ್ನು ಮಾಡುತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದರು. 

ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕಿನ‌ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೊಳಪಡುವಂತೆ ಅವರಲ್ಲಿ ಮನವಿ ಮಾಡಿಕೊಳ್ಳಬೇಕು. ರೋಗ ಉಲ್ಬಣಗೊಂಡು ಪರಿಸ್ಥಿತಿ ಕೈ ಮೀರುವ ಹಂತದ ವರೆಗೂ ಕಾಯಬಾರದು. ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದರೊಂದಿಗೆ ಡೆಂಗ್ಯೂ, ಮಲೇರಿಯಾ ರೋಗದ ಕುರಿತು ಗಮನ ನೀಡಬೇಕು. ಸೊಳ್ಳೆ ಪರದೆ ವಿತರಣೆ ಅಥವ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ., ಜಯಶ್ರೀ ಕುಡ್ವ, ಬಂದರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು