11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ‌ ಮಾಡೋಣ: ಶಾಸಕ‌ ವೇದವ್ಯಾಸ ಕಾಮತ್

27/05/2021, 18:52

ಮಂಗಳೂರು(reporterkarnataka news):

ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇಂದ್ರದಲ್ಲಿ ಸಂಬಂಧಪಟ್ಟ‌ ವಾರ್ಡ್`ಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ನಿಯಂತ್ರಣಕ್ಕಾಗಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತಿದ್ದಾರೆ. ಸೋಂಕಿತರ ಆರೋಗ್ಯದ ಕುರಿತು ಕಾಳಜಿ ವಹಿಸುವ, ಮಾಹಿತಿ ಪಡೆಯುವ ಕೆಲಸವನ್ನು ಮಾಡುತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದರು. 

ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕಿನ‌ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೊಳಪಡುವಂತೆ ಅವರಲ್ಲಿ ಮನವಿ ಮಾಡಿಕೊಳ್ಳಬೇಕು. ರೋಗ ಉಲ್ಬಣಗೊಂಡು ಪರಿಸ್ಥಿತಿ ಕೈ ಮೀರುವ ಹಂತದ ವರೆಗೂ ಕಾಯಬಾರದು. ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದರೊಂದಿಗೆ ಡೆಂಗ್ಯೂ, ಮಲೇರಿಯಾ ರೋಗದ ಕುರಿತು ಗಮನ ನೀಡಬೇಕು. ಸೊಳ್ಳೆ ಪರದೆ ವಿತರಣೆ ಅಥವ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ., ಜಯಶ್ರೀ ಕುಡ್ವ, ಬಂದರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು