1:29 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೊರೊನಾ ಟೆಸ್ಟ್‌ ಮಾಡಿ ಪಾದಯಾತ್ರೆ ಹತ್ತಿಕ್ಕಲು ಬಿಜೆಪಿ ಹುನ್ನಾರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪ

10/01/2022, 23:50

ರಾಮನಗರ(reporterkarnataka.com): 

ಕೊರೊನಾ ಟೆಸ್ಟ್‌ ಮಾಡಲು ಬಿಜೆಪಿಯವರು ವೈದ್ಯರನ್ನು ಕಳುಹಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್‌ ಅಂತ ತೋರಿಸಿ ಪಾದಯಾತ್ರೆ ಹತ್ತಿಕ್ಕುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಪಾದಿಸಿದರು.

.ದೊಡ್ಡ ಆಲಹಳ್ಳಿಯಲ್ಲಿ ಮಾತನಾಡಿದ ಅವರು, ರಾತ್ರಿ ಕೋವಿಡ್ ಟೆಸ್ಟ್ ಮಾಡಲು ಜಿಲ್ಲಾಡಳಿತ ಅಧಿಕಾರಿಗಳನ್ನು ಕಳಿಸಿದ್ದರು. ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗೊತ್ತಿಲ್ಲ, ನನ್ನ ಹತ್ತಿರ ಹತ್ತು ಜನರ ವೈದ್ಯರ ತಂಡ ಇದೆ ಅಂತಾ. ನನ್ನನ್ನು ನೋಡಿದ್ರೆ ಕೊರೊನಾ ಲಕ್ಷಣಗಳು ಇದೆ ಅನಿಸುತ್ತಾ? ನಿನ್ನೆ ಸಮರ್ಥವಾಗಿ ನಡೆದಿದ್ದೇನೆ, ಎಲ್ಲೂ ಕೂಡ ಸುಸ್ತಾಗಿಲ್ಲ. ನನಗೆ ಟೆಸ್ಟ್ ಮಾಡಿ ಪಾಸಿಟಿವ್ ಅಂತಾ ಹೇಳಿದರೆ, ಪಾದಯಾತ್ರೆ ಹತ್ತಿಕ್ಕಬಹುದು ಅಂತಾ ತಿಳಿದಿದ್ದಾರೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕರ್ಫ್ಯೂ ಇರುವುದರಿಂದ ಸಾಮಾನ್ಯ ಜನರು ಕಷ್ಟಪಡುವ ಸ್ಥಿತಿ ಇದೆ. ಈ ಕರ್ಫ್ಯೂವನ್ನು ತೆಗೆಯಬೇಕು. ವಿಮಾನ ನಿಲ್ದಾಣದಲ್ಲಿ ದಂಧೆ ಮಾಡುತ್ತಿದ್ದಾರೆ. ಇಬ್ಬರು ವಿದೇಶದಿಂದ ಬಂದರೆ, ಒಬ್ಬರಿಗೆ ಪಾಸಿಟಿವ್ ತೋರಿಸುತ್ತಿದ್ದಾರೆ. ಕೊರೊನಾ ಹೆಸರಿನಲ್ಲಿ ದುಡ್ಡು ಹೊಡೆದಿದ್ದು ಸಾಕು ಎಂದು ಟೀಕಿಸಿದ್ದಾರೆ.

ನನ್ನ ಕಾಂಗ್ರೆಸ್‌ನವರು ರೇಪ್ ಮಾಡ್ತಾ ಇದಾರೆ ಅಂತಾ ಆರಗ ಜ್ಞಾನೇಂದ್ರ ಹೇಳಿದ್ದರು. ಈಗ ಕ್ಷಮೆ ಕೇಳಿ ಅಂತಾ ಹೇಳುತ್ತಿದ್ದಾರೆ. ಆತ ಅಜ್ಞಾನ ಆರಗ ಜ್ಞಾನೇಂದ್ರ. ಬಿಜೆಪಿ ಅವರಿಗೆ ನನ್ನ ನೆನಯದೇ ಇದ್ದರೆ ನಿದ್ದೆ ಬರಲ್ಲಾ. ನಾನು ಕೂತರು, ನಿಂತರು ಟ್ರೋಲ್ ಮಾಡುತ್ತಾರೆ. ಅವರು ಟ್ರೋಲ್ ಮಾಡಿಕೊಳ್ಳಲಿ ಬಿಡಿ, ನಾನು ತಲೆಕೆಡಿಸಿಕೊಳ್ಳಲ್ಲ. ಈ ಪಾದಯಾತ್ರೆ 10 ದಿನವೂ ನಡೆಯುತ್ತದೆ ಎಂದಿದ್ದಾರೆ.

ಸಿಎಂ ಅಕ್ಕ-ಪಕ್ಕ ಕೂತವರಿಗೆ ಪಾಸಿಟಿವ್ ಬಂದಿದೆ. ಸಿಎಂಗೆ ಯಾಕೆ ಟೆಸ್ಟ್ ಮಾಡಿಲ್ಲ. ಅವರಿಗೆ ಲಕ್ಷಣಗಳು ಇಲ್ವಾ? ಇದೇ ಬಿಜೆಪಿ ಅವರು ರಾಜಕೀಯಕ್ಕಾಗಿ ಮಾಡುತ್ತಿರುವ ಡ್ರಾಮ. ನಿನ್ನೆ ಕರ್ಫ್ಯೂ ನೆಪದಲ್ಲಿ, ನಮ್ಮ ಕಾರ್ಯಕರ್ತರ ಬಸ್‌ಗಳನ್ನು ಹಿಡಿದಿದ್ದರು. ಇಂದು ಕರ್ಫ್ಯೂ ಇಲ್ಲ, ಪಾದಯಾತ್ರೆಗೆ ಅಪಾರ ಸಂಖ್ಯೆಯಲ್ಲಿ ಜನ ಬರ್ತಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು