4:19 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕೊರೊನಾ, ಝೀಕಾ ವೈರಸ್ ಭೀತಿ: ದ.ಕ. ಜಿಲ್ಲೆಯ ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಆರ್‌ಟಿಪಿಸಿಆರ್ ಕಡ್ಡಾಯ

13/07/2021, 20:52

ಮಂಗಳೂರು(reporterkarnataka news): ಕೇರಳದಲ್ಲಿ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಿರುವ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆರೆಯ ಕೇರಳದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಈಡಿಸ್‌ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ನಿಗಾ ವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರ ತಪಾಸಣೆಗೆ ಸಂಬಂಧಿಸಿ ಈಗಾಗಲೇ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಕೋವಿಡ್ ಲಸಿಕಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿಲಾಗಿದೆ. ಉಳಿದಂತೆ ಝೀಕಾಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ ಜಾರಿ ಮಾಡಿಲ್ಲ.

ಸೊಳ್ಳೆಗಳಿಂದ ಈ ವೈರಸ್ ಹರಡುವುದರಿಂದ ರಾಜ್ಯದಿಂದ ಬರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಈ ಝೀಕಾ ವೈರಸ್‌ನ ಗುಣಲಕ್ಷಣಗಳನ್ನು ಪತ್ತೆಹಚ್ಚುವುದು ಕ್ಲಿನಿಕಲ್ ಆಧಾರದಲ್ಲಿ ಮಾಡಬೇಕಾಗುತ್ತದೆ. ಈ ಬಗ್ಗೆ ಯಾವುದೇ ಗಾಬರಿ ಬೇಡ. ಗಡಿಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ರೀತಿಯ ಯಾವ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ 
ಈಗಾಗಲೇ ತಿಳಿಸಿದ್ದಾರೆ.

ಈ ಮಧ್ಯೆ ಡಿಸಿಪಿ ಹರಿರಾಂ ಶಂಕರ್ ಅವರು ಕೇರಳ – ಕರ್ನಾಟಕ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು