2:46 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಆಶ್ರಯ ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ: ಗ್ರಾಮ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿ ಹೆಸರು ಪಂಚಾಯಿತಿಯಲ್ಲಿ ಮಾಯ!!

09/03/2026, 22:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಗ್ರಾಮ ಪಂಚಾಯತಿಯಲ್ಲಿ ಭಾರಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಆಶ್ರಯ ವಸತಿ ಯೋಜನೆಗೆ ಗ್ರಾಮ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿಗೆ ಬಾರಿ ಮೋಸ ಮಾಡಲಾಗಿದೆ. ಫಲಾನುಭವಿಗಳ ಪಟ್ಟಿಯಲ್ಲಿ ಫಲಾನುಭವಿಯ ಹೆಸರನ್ನು ಕಿತ್ತೆಸೆದು ಆ ಜಾಗದಲ್ಲಿ ಬೇರೆ ವ್ಯಕ್ತಿಯ ಹೆಸರು ಹಾಕಲಾಗಿದೆ.
ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಂತರಗಂಗೆ ಗ್ರಾಮದಲ್ಲಿ ಗ್ರಾಮ ಸಭೆಯಲ್ಲಿ ಫಲಾನುಭವಿಗಳ ಹೆಸರು ಆಯ್ಕೆ ಮಾಡಿ ಪಟ್ಟಿ ಸಿದ್ದಪಡಿಸಲಾಯಿತು. ನಂತರ ಗ್ರಾಮಸ್ಥರಿಂದ ಸಹಿ ಕೂಡ ಪಡೆಯಲಾಗಿದೆ. ಆದರೆ, ನಂತರ ಗ್ರಾಮ ಪಂಚಾಯಿತಿಯಲ್ಲಿ ಬೇರೆಯೇ ಆಟ ನಡೆದಿದೆ. ಪಟ್ಟಿಯಲ್ಲಿ ಬದಲಾವಣೆ ಮಾಡಿ ನಿಜವಾದ ಫಲಾನುಭವಿಗೆ ಅನ್ಯಾಯ ಮಾಡಲಾಗಿದೆ.
ಗ್ರಾಮ ಸಭೆಯಲ್ಲಿ ಲಲಿತಾ ಸಾಲಿಮಠ ಅವರ ಹೆಸರು ಆಯ್ಕೆ ಮಾಡಲಾಗಿತ್ತು. ಆದರೆ ಪಂಚಾಯತಿಯಲ್ಲಿ ಆ ಹೆಸರನ್ನು ತೆಗೆದುಹಾಕಿ ಬೇರೆಯವರ ಹೆಸರನ್ನು ಹಾಕಲಾಯಿತು.
ಗ್ರಾಮದಲ್ಲಿ ಫಲಾನುಭವಿಗಳ ಮನೆ ಜಿಪಿಎಸ್ ಕಾರ್ಯಾಚರಣೆ ನಡೆಯುತ್ತಿದ್ದರೂ ಲಲಿತಾ ಸಾಲಿಮಠ ಮನೆ ಜಿಪಿಎಸ್ ಮಾಡಲು ಬರಲಿಲ್ಲ. ಗ್ರಾಮ ಪಂಚಾಯಿತಿ ಸಿಬ್ಬಂದಿ ಕೇಳಿದಾಗ ಅವರು ಏನೇನೋ ಸಾಬೂಬು ಹೇಳಿದ್ದಾರೆ. ಅಮ್ಮ ಇದರಲ್ಲಿ ನಿಮ್ಮ ಹೆಸರು ಇನ್ನೂ ಬಂದಿಲ್ಲ. ಬೇರೆಯವರಿಗೆ ಮಾತ್ರ ಬಂದಿದೆ. ನಿಮ್ಮದು ಬರಬಹುದು ನೋಡಿ ಎಂದು ಹೇಳಿದ್ದಾರೆ.


ಫಲಾನುಭವಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದಾಗ ಇವರ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
ತಾಲೂಕು ಪಂಚಾಯಿತಿ ಅಧಿಕಾರಿಗಳಿಗೂ ಇದರ ಬಗ್ಗೆ ಮಾಹಿತಿ ನೀಡಿದರೂ ಏನು ಪ್ರಯೋಜನವಾಗಿಲ್ಲ. ವಿಡಿಯೋ ಫೋಟೋ ಮತ್ತು ದಾಖಲೆಗಳಿದ್ದರೂ ಅಧಿಕಾರಿಗಳು ಕ್ಯಾರಿಯನ್ನುತ್ತಿಲ್ಲ.
ಈ ಬಗ್ಗೆ ಫಲಾನುಭವಿ ನಿಗಮಕ್ಕೆ ದೂರು ನೀಡಿದ್ದಾರೆ.
ಮುಂದೇನಾಗುತ್ತೋ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು