4:43 AM Tuesday26 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ ಬಹುತೇಕ ಪೂರ್ಣ: ಶೀಘ್ರದಲ್ಲೇ ತೆರೆಗೆ

16/01/2022, 15:56

ಮಂಗಳೂರು(reporterkarnataka.com): ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಮಾತಿನ ಚಿತ್ರೀಕರಣ ಇತ್ತೀಚೆಗಷ್ಟೇ

ಮುಗಿದಿದ್ದು ಇನ್ನು ಕೇವಲ ಹಾಡಿನ‌ ಚಿತ್ತೀಕರಣವಷ್ಟೇ ಬಾಕಿ ಇದೆ. ಮಂಗಳೂರು, ಮರವೂರು ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಕಳೆದ ಹತ್ತೊಂಬತ್ತು ದಿನಗಳಿಂದ ಸತತ ಚಿತ್ರೀಕರಣದಲ್ಲಿ ತೊಡಗಿದ್ದ ಚಿತ್ರತಂಡ ಇದರಲ್ಲಿ ಸಾಹಸ ದೃಶ್ಯವನ್ನು ಕೂಡ ಚಿತ್ರೀಕರಿಸಿದೆ.

‘ಗಿರ್ ಗಿಟ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ನಾಯಕ ನಟನಾಗಿ ನಟಿಸಿ, ಸರ್ಕಸ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಆರ್.‌ಎಸ್.‌‌ಸಿನೆಮಾ,  ಶೂಲಿನ್ ಫಿಲಂಸ್ ಬ್ಯಾನರ್ ನಲ್ಲಿ ಅನಿಲ್ ಶೆಟ್ಟಿ, ಸುಧಾಕರ್ ಶೆಟ್ಟಿ ಮತ್ತು ಮಂಜುನಾಥ್ ಅತ್ತಾವರ್ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಇದಾಗಿದೆ.

ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಚಿತ್ರತಂಡದೊಂದಿಗೆ ನೇರಪ್ರಸಾರದಲ್ಲಿ ಬಂದ ನಟ ರೂಪೇಶ್ ಶೆಟ್ಟಿ ಅನಿರೀಕ್ಷಿತವಾಗಿ ಬಂದೊಂದಗಿದ  ಕರ್ಫ್ಯೂ ಹಾಗೂ ಕೊರೋನಾದ ಕರಿನೆರಳಿನ ನಡುವೆಯೂ ಎಲ್ಲಾ ನಿಯಮಗಳನ್ನು ಪಾಲಿಸಿ ಅಂದುಕೊಂಡಂತೆ ಚಿತ್ರ ಚೆನ್ನಾಗಿ ಮೂಡಿ ಬರಲು ಕಾರಣವಾದ ಎಲ್ಲಾ ತಂತ್ರಜ್ಞರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕನ್ನಡ ಚಿತ್ರಗಳಲ್ಲಿ ಗಮನ ಸೆಳೆದಿದ್ದ ನಟ ಯಶ್ ಶೆಟ್ಟಿ ‘ಸರ್ಕಸ್’  ಚಿತ್ರದ ಮೂಲಕ ಖಳನಟನಾಗಿ ತುಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ರಚನಾ ರೈ ತುಳುಚಿತ್ರರಂಗಕ್ಕೆ ಪ್ರವೇಶಮಾಡುತ್ತಿದ್ದು ಖ್ಯಾತ ಹಾಸ್ಯನಟರಾದ

ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಮತ್ತಿತರು ನಟಿಸುತ್ತಿರುವ ‘ಸರ್ಕಸ್’ ನಲ್ಲಿ ರೂಪೇಶ್ ಶೆಟ್ಟಿ ಜತೆ ರಾಕೇಶ್ ಕದ್ರಿ ನಿರ್ದೇಶನಕ್ಕೆ ಜೊತೆಯಾಗಿದ್ದಾರೆ. ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ರಾಹುಲ್ ವಶಿಷ್ಠ ಸಂಕಲನ‌ ಈ ಚಿತ್ರಕ್ಕಿದ್ದರೆ ದೀಕ್ಷಿತ್ ಆಳ್ವ ಕಾರ್ಯಕಾರಿ‌‌‌ ನಿರ್ಮಾಪಕರಾಗಿ ಜವಾಬ್ದಾರಿ ವಹಿಸಿದ್ದಾರೆ. 

ಹಾಡಿನ ಚಿತ್ರೀಕರಣ ಮುಗಿಸಿ ಪರಿಸ್ಥಿತಿ ತಿಳಿಯಾದ ಬಳಿಕ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಇರಾದೆಯನ್ನು ರೂಪೇಶ್ ಶೆಟ್ಟಿ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು