10:05 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಖೋಟಾ ನೋಟು ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

28/08/2025, 12:53

ಉಪ್ಪಿನಂಗಡಿ(reporterkarnataka.com): ಖೋಟಾ ನೋಟು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಉಪ್ಪಿನಂಗಡಿ ಬಳಿ ಬಂಧಿಸಿದ್ದಾರೆ.
ಬಿ.ಸಿ ರೋಡ್ ನ ಜೋಡು ಮಾರ್ಗದ ತಲಪಾಡಿ ಹೌಸ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಬಂಧಿತ ಆರೋಪಿ. ಈತನ‌ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ 8 ಬಾರಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿತ್ತು. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆಪಾದಿತನ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು