11:40 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ನ್ಯಾಯಾಲಯದ ಕಾರ್ಯ ಮಾಡಲು ಮುಂದಾಗಬೇಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತೀವ್ರ ತರಾಟೆ

31/05/2024, 18:30

ಬೆಂಗಳೂರು(reporterkarnataka.com): ಶಾಸಕರು ಕಾನೂನು ಮಾಡುವ ಕೆಲಸ ಮಾಡಬೇಕು. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಅದು ಬಿಟ್ಟು ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ತನ್ನ ಮೇಲೆ ಬೆಳ್ತಂಗಡಿ ಪೊಲೀಸರು ಹಾಕಿರುವ ಎರಡು ಎಫ್ ಐಆರ್ ರದ್ದತಿ ಕೋರಿ ಶಾಸಕ ಹರೀಶ್ ಪೂಂಜ ಅವರು ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಶಾಸಕರ ನಡೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಂಧನ ಪ್ರಕರಣ ನಡೆದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾದೀಶರಿದ್ದಾರೆ. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದು. ಅದನ್ನು ಮಾಡಿ. ನ್ಯಾಯಾಲಯಕ್ಕೆ ತನ್ನ ಕಾರ್ಯ ಮಾಡಲು ಬಿಡಿ. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಾರೆ ಎಂದು ನಮ್ಮ ಹಿಂದೆ ಬಂದು ಕುಳಿತರೆ, ನಾವು ಕೆಲಸ ಮಾಡುವುದು ಹೇಗೆ? ಈ ರೀತಿಯ ವರ್ತನೆಯನ್ನು ಸಹಿಸಲು ಆಗುವುದಿಲ್ಲ ಎಂದು ಹೈಕೋರ್ಟ್ ಪೀಠ ಎಚ್ಚರಿಕೆ ನೀಡಿತು.
ನೀವು ಠಾಣೆಗೆ ಹೋಗಬಾರದಿತ್ತು. ಯಾವುದೇ ವ್ಯಕ್ತಿಯನ್ನು ಬಂಧಿಸಿದ್ದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಶಾಸಕರು ಠಾಣೆಗೆ ಹೋದರೆ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವುದು ಹೇಗೆ ಎಂದು ನ್ಯಾಯಮೂರ್ತಿ ಖಾರವಾಗಿಯೇ ಪ್ರಶ್ನಿಸಿದರು.
ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಇಟ್ಟ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಸಬ್ ಇನ್ಸ್‌ಪೆಕ್ಟರ್ ಅವರಲ್ಲಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಪ್ರಶ್ನಿಸಿ ಪೊಲೀಸರಿಗೆ ದಬಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು