2:36 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ನ್ಯಾಯಾಲಯದ ಕಾರ್ಯ ಮಾಡಲು ಮುಂದಾಗಬೇಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತೀವ್ರ ತರಾಟೆ

31/05/2024, 18:30

ಬೆಂಗಳೂರು(reporterkarnataka.com): ಶಾಸಕರು ಕಾನೂನು ಮಾಡುವ ಕೆಲಸ ಮಾಡಬೇಕು. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಅದು ಬಿಟ್ಟು ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ತನ್ನ ಮೇಲೆ ಬೆಳ್ತಂಗಡಿ ಪೊಲೀಸರು ಹಾಕಿರುವ ಎರಡು ಎಫ್ ಐಆರ್ ರದ್ದತಿ ಕೋರಿ ಶಾಸಕ ಹರೀಶ್ ಪೂಂಜ ಅವರು ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಶಾಸಕರ ನಡೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬಂಧನ ಪ್ರಕರಣ ನಡೆದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾದೀಶರಿದ್ದಾರೆ. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ನಿಮ್ಮ ಕೆಲಸ ಕಾನೂನು ಮಾಡುವುದು. ಅದನ್ನು ಮಾಡಿ. ನ್ಯಾಯಾಲಯಕ್ಕೆ ತನ್ನ ಕಾರ್ಯ ಮಾಡಲು ಬಿಡಿ. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಾರೆ ಎಂದು ನಮ್ಮ ಹಿಂದೆ ಬಂದು ಕುಳಿತರೆ, ನಾವು ಕೆಲಸ ಮಾಡುವುದು ಹೇಗೆ? ಈ ರೀತಿಯ ವರ್ತನೆಯನ್ನು ಸಹಿಸಲು ಆಗುವುದಿಲ್ಲ ಎಂದು ಹೈಕೋರ್ಟ್ ಪೀಠ ಎಚ್ಚರಿಕೆ ನೀಡಿತು.
ನೀವು ಠಾಣೆಗೆ ಹೋಗಬಾರದಿತ್ತು. ಯಾವುದೇ ವ್ಯಕ್ತಿಯನ್ನು ಬಂಧಿಸಿದ್ದಲ್ಲಿ ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಶಾಸಕರು ಠಾಣೆಗೆ ಹೋದರೆ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವುದು ಹೇಗೆ ಎಂದು ನ್ಯಾಯಮೂರ್ತಿ ಖಾರವಾಗಿಯೇ ಪ್ರಶ್ನಿಸಿದರು.
ಅಕ್ರಮ ಗಣಿಗಾರಿಕೆ ಮತ್ತು ಸ್ಫೋಟಕ ದಾಸ್ತಾನು ಇಟ್ಟ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಗೆ ಹೋಗಿ ಸಬ್ ಇನ್ಸ್‌ಪೆಕ್ಟರ್ ಅವರಲ್ಲಿ ಪೊಲೀಸ್ ಠಾಣೆ ನಿಮ್ಮ ಅಪ್ಪಂದಾ? ಎಂದು ಪ್ರಶ್ನಿಸಿ ಪೊಲೀಸರಿಗೆ ದಬಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು