4:57 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೋವಿಡ್ 3ನೇ ಅಲೆ ಬರುವ ಮುನ್ನ ಅಗತ್ಯ ಮುನ್ನೆಚ್ಚರಿಕೆ ವಹಿಸಿ:  ಸಚಿವ ಮುನಿರತ್ನ ಸೂಚನೆ

13/08/2021, 09:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.

ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿದ ಅವರು , 3ನೇ ಅಲೆಯಿಂದ ಸಂಕಷ್ಟಕ್ಕಿಡಾಗದೆ ಐಸಿಯು ಹಾಸಿಗೆಗಳು , ವೆಂಟಿಲೇಟರ್ , ಪೈಪ್ ಲೈನ್ ಆಕ್ಸಿಜನ್ ಮತ್ತಿತರ ಸೌಲಭ್ಯಗಳ ಬಗ್ಗೆ ಅವರು ಪರಿಶೀಲನೆ ಮಾಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆ ಹಾಗೂ ಕೋವಿಡ್ ವಾರ್ ರೂಂನಲ್ಲಿರುವ ಕೊರತೆ ಮತ್ತು ಆಸ್ಪತ್ರೆಗಳಲ್ಲಿರುವ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಕೋವಿಡ್ ಸಂಭಾವ್ಯ 3ನೇ ಅಲೆ ಬರುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು , ಮಕ್ಕಳ ಆರೋಗ್ಯವನ್ನು ಕಾಪಾಡುವ ಬಗ್ಗೆ ವಿಶೇಷ ಗಮನ ಹರಿಸಬೇಕು. ಮಕ್ಕಳಿಗೆ ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆ ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಅವರು ತಿಳಿಸಿದರು. 

ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆಸ್ಪತ್ರೆಗಳಲ್ಲಿ 3 ನೇ ಅಲೆಯನ್ನು ನಿಯಂತ್ರಣ ಮಾಡಲು ಬೇಕಾದ ಎಲ್ಲಾ ಸಲಕರಣೆಗಳನ್ನು ಒದಗಿಸುವುದು . ಕೋವಿಡ್ 3 ನೇ ಅಲೆಯಲ್ಲಿ ತಜ್ಞರ ವರದಿ ಪ್ರಕಾರ ಮಕ್ಕಳ ಮೇಲೆ ಎಷ್ಟು ಪರಿಣಾಮ ಬೀರುತ್ತದೆ . ಆ ಮಕ್ಕಳ ಮೇಲೆ ಪರಿಣಾಮ ಬೀರದಿರುವುದಕ್ಕೆ ನೀವು ಏನು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರಾ . ಎಷ್ಟು ಮಕ್ಕಳಿಗೆ ಬೆಡ್‌ಗಳ ವ್ಯವಸ್ಥೆ ಇದೆ ಎಂದು ಆರೋಗ್ಯ ಅಧಿಕಾರಿಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು , ಆಸ್ಪತ್ರೆಯಲ್ಲಿ ಸಂಪೂರ್ಣವಾಗಿ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕು . ನಾವು ಮಾಡುವ ಕೆಲಸ ಜನರ ಜೀವನವನ್ನು ಕೆಲಸವಾಗಬೇಕು ತಿಳಿಸಿದರು. 

ಆಸ್ಪತ್ರೆಯ ಸಿಬ್ಬಂದಿಗಳ ಮತ್ತು ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು . ಈಗ ಇರುವ 100 ಹಾಸಿಗಳ ಜೊತೆಗೆ 25 ಹಾಸಿಗೆಳ ಬೆಡ್‌ಗಳನ್ನು ಹೆಚ್ಚಿಸಲಾಗುವುದು . ಮಕ್ಕಳಿಗಾಗಿ 5 ವೆಂಟಿಲೇಟರ್ , ವಯಸ್ಕರ 5 ವೆಂಟಿಲೇಟರ್‌ಗಳ ಪೈಪ್ ಲೈನ್‌ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ ಶ್ರೀನಿವಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ ವೇಣುಗೋಪಾಲ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು