12:18 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಕೋವಿಡ್​ನ​ ಹೊಸ ತಳಿ XE ಎಂಟ್ರಿ: ಗಾಬರಿ ಬೇಡ ಎಂದ ಎನ್‌ಟಿಎಜಿಐ ಮುಖ್ಯಸ್ಥ ಎನ್​.ಕೆ.ಆರೋರಾ

12/04/2022, 11:19

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಜನರಲ್ಲಿ ಮತ್ತೆ ಆತಂಕ ಮನೆಮಾಡಿದ್ದು, ಈ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್‌ಟಿಎಜಿಐ) ಮುಖ್ಯಸ್ಥ ಎನ್​.ಕೆ.ಆರೋರಾ ತಿಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿ ಕೋವಿಡ್​ನ​ ಹೊಸ ತಳಿ ಎಕ್ಸ್​​ಇ ಪತ್ತೆಯಾದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಅವರು, ಒಮಿಕ್ರಾನ್​ನ ಹೊಸ ತಳಿ ಬರುತ್ತಲೇ ಇರುತ್ತವೆ. ಇತ್ತೀಚೆಗೆ ಪತ್ತೆಯಾದ ಎಕ್ಸ್​​ಇ ಎಕ್ಸ್​​ ಸರಣಿಯ ರೂಪಾಂತರಿಯಾಗಿದೆ. ಇಂತಹ ತಳಿಗಳು ಹುಟ್ಟುತ್ತಿರುತ್ತವೆ. ಜನರು ಆತಂಕಪಡುವ ಅಗತ್ಯ ಇಲ್ಲ ಎಂದರು.

ಭಾರತದಲ್ಲಿ ಇದುವರೆಗೆ ದಾಖಲಾದ ಮಾಹಿತಿ ಪ್ರಕಾರ, ಈ ತಳಿ ಅಷ್ಟೊಂದು ವೇಗವಾಗಿ ಹರಡದು. ಎಕ್ಸ್​​ಇ ತಳಿಯು ಮೊದಲ ಹಂತದ ಪರೀಕ್ಷೆಯ ಭಾಗವಾಗಿದೆ. ಒಂದೇ ಪರೀಕ್ಷೆಯಿಂದ ಹೊಸ ತಳಿ ಬರುತ್ತದೆ ಎಂದು ಹೇಳುವುದು ಕಷ್ಟಸಾಧ್ಯ ಎಂದರು.

ಕಳೆದ ತಿಂಗಳು ಮುಂಬೈನಿಂದ ಗುಜರಾತ್​​ನ ವಡೋದರಾಗೆ ಪ್ರಯಾಣಿಸಿದ್ದ 67 ವರ್ಷದ ವ್ಯಕ್ತಿಯಲ್ಲಿ ಇತ್ತೀಚೆಗೆ ಎಕ್ಸ್​​ಇ ಸೋಂಕು ಪತ್ತೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು