3:59 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ  

22/05/2021, 15:19

ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು   “ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ” ಎಂಬ ಕಾರ್ಯಾಗಾರವನ್ನು ಆನ್ಲೈನ್  ಮೂಲಕ ಹಮ್ಮಿಕೊಂಡಿತ್ತು.

ಕಾರ್ಯಾಗಾರದ  ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅಧಿಕಾರಿ  ಡಾ.  ಶೇಷಪ್ಪ ಅಮೀನ್ ಕೆ.ನೆರವೇರಿಸಿದರು. ಉದ್ಘಾಟನಾ ಮಾತುಗಳನ್ನಾಡಿದ ಡಾ.  ಶೇಷಪ್ಪ ಅಮೀನ್ ಇವರು ಜನರಲ್ಲಿ ಕೊರೋನಾ ದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕು ಹಾಗೂ ಅಪನಂಬಿಕೆಗಳನ್ನು ವೈಜ್ಞಾನಿಕ ದೃಷ್ಟಿಕೋನದ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬ ಕಿವಿಮಾತುಗಳನ್ನು ಆಡಿದರು. ಇದರ ಜೊತೆಗೆ ನಮ್ಮ ಮನಸ್ಥಿತಿಯನ್ನು ಉತ್ತಮವಾಗಿ ಇರಿಸಿಕೊಳ್ಳಬೇಕು ಎಂಬ ತಿಳುವಳಿಕೆಯನ್ನು ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ತರಗತಿಗಳು ಜೀವನದ ಕ್ರಮವಾಗಿದೆ. ಎನ್.ಎನ್.ಎಸ್ ಸ್ವಯಂಸೇವಕರು ಮಾನಸಿಕ ಆರೋಗ್ಯದ ವಿಚಾರವಾಗಿ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ತಲುಪಿಸಿದಾಗ , ಕಾರ್ಯಾಗಾರದ ಉದ್ದೇಶ ಸಫಲವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಕೊಂಡ ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ.  ಅವರು ವ್ಯಾಯಾಮ ಹಾಗೂ ಉತ್ತಮ ಆಹಾರ ಸೇವನೆಯನ್ನು ಮಾಡುವ ಮೂಲಕ ಮಾನಸಿಕ ಹಾಗು ದೈಹಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವಂತೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸಹ್ಯಾದ್ರಿ ಕಾಲೇಜಿನ ಆರೋಗ್ಯ ಮತ್ತು ಸಮಾಲೋಚನಾ ಕೇಂದ್ರದ ಸಲಹೆಗಾರ ಅಂಕಿತ್ ಎಸ್ ಕುಮಾರ್ ಅವರು ಈ ಕೋವಿಡ ಪರಿಸ್ಥಿತಿಯಲ್ಲಿ ನಮಗೆ ಬೇಕಾದಂತಹ ಮಾನಸಿಕ ಯೋಗಕ್ಷೇಮದ ಬಗ್ಗೆ ವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಇವರು ಮನಸ್ಸನ್ನು ಶುದ್ಧವಾಗಿ ಹಾಗೂ ಸ್ಥಿರವಾಗಿ ಇರಿಸಿಕೊಳ್ಳುವಂತೆ ಸೂಚಿಸಿದರು. ನಾವು ಯಾವುದೇ ವಿಷಯದ ಬಗ್ಗೆ ಹೆಚ್ಚಾಗಿ ಚಿಂತಿಸದೆ ಜೀವಿಸಬೇಕು. ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಲು ಧ್ಯಾನ, ಪ್ರಾಣಾಯಾಮ, ವ್ಯಾಯಾಮ ಹಾಗೂ ನಮಗೆ ಇಷ್ಟವಾದಂತಹ ಕೆಲಸಗಳನ್ನು ಮಾಡುತ್ತಿರಬೇಕು. ಮುಂದೇನಾಗುತ್ತದೆ ಎಂಬುದನ್ನು ಚಿಂತಿಸದೆ ಆ ಕ್ಷಣದಲ್ಲಿ ಜೀವಿಸಬೇಕು. ಅತಿಯಾದರೆ ಅಮೃತವೂ ವಿಷ ಎನ್ನುವಂತೆ,ಅತಿಯಾದ ಚಿಂತೆಯೂ ನಮ್ಮ ಜೀವನದ ಖುಷಿಯನ್ನು ಕಿತ್ತುಕೊಳ್ಳುತ್ತದೆ.ನಮಗೆ ನಡೆಯುತ್ತಿರುವ ವಿಷಯ ದ ಬಗ್ಗೆ ಗಮನ, ಸ್ಪಷ್ಟತೆ ಹಾಗೂ ಏಕಾಗ್ರತೆ ಇರಬೇಕು ಎಂದು ನುಡಿದರು.  ಸರಿಯಾದ ಉಸಿರಾಟ ಮಾಡುವ ವಿಧಾನವನ್ನು ಪ್ರಾತ್ಯಕ್ಶಿಕೆಯ ಮೂಲಕ ತಿಳಿಸಿಕೊಟ್ಟರು.


ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಕಾರ್ಯಾಗಾರದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಪ್ರಾಸ್ಥಾವಿಕ ಮಾತುಗಳನ್ನಾಡಿ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.ಇನ್ನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ  ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು