9:44 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ  

22/05/2021, 15:19

ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು   “ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ” ಎಂಬ ಕಾರ್ಯಾಗಾರವನ್ನು ಆನ್ಲೈನ್  ಮೂಲಕ ಹಮ್ಮಿಕೊಂಡಿತ್ತು.

ಕಾರ್ಯಾಗಾರದ  ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅಧಿಕಾರಿ  ಡಾ.  ಶೇಷಪ್ಪ ಅಮೀನ್ ಕೆ.ನೆರವೇರಿಸಿದರು. ಉದ್ಘಾಟನಾ ಮಾತುಗಳನ್ನಾಡಿದ ಡಾ.  ಶೇಷಪ್ಪ ಅಮೀನ್ ಇವರು ಜನರಲ್ಲಿ ಕೊರೋನಾ ದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕು ಹಾಗೂ ಅಪನಂಬಿಕೆಗಳನ್ನು ವೈಜ್ಞಾನಿಕ ದೃಷ್ಟಿಕೋನದ ಕಡೆಗೆ ತೆಗೆದುಕೊಂಡು ಹೋಗಬೇಕು ಎಂಬ ಕಿವಿಮಾತುಗಳನ್ನು ಆಡಿದರು. ಇದರ ಜೊತೆಗೆ ನಮ್ಮ ಮನಸ್ಥಿತಿಯನ್ನು ಉತ್ತಮವಾಗಿ ಇರಿಸಿಕೊಳ್ಳಬೇಕು ಎಂಬ ತಿಳುವಳಿಕೆಯನ್ನು ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ತರಗತಿಗಳು ಜೀವನದ ಕ್ರಮವಾಗಿದೆ. ಎನ್.ಎನ್.ಎಸ್ ಸ್ವಯಂಸೇವಕರು ಮಾನಸಿಕ ಆರೋಗ್ಯದ ವಿಚಾರವಾಗಿ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ತಲುಪಿಸಿದಾಗ , ಕಾರ್ಯಾಗಾರದ ಉದ್ದೇಶ ಸಫಲವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಕೊಂಡ ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ.  ಅವರು ವ್ಯಾಯಾಮ ಹಾಗೂ ಉತ್ತಮ ಆಹಾರ ಸೇವನೆಯನ್ನು ಮಾಡುವ ಮೂಲಕ ಮಾನಸಿಕ ಹಾಗು ದೈಹಿಕ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವಂತೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸಹ್ಯಾದ್ರಿ ಕಾಲೇಜಿನ ಆರೋಗ್ಯ ಮತ್ತು ಸಮಾಲೋಚನಾ ಕೇಂದ್ರದ ಸಲಹೆಗಾರ ಅಂಕಿತ್ ಎಸ್ ಕುಮಾರ್ ಅವರು ಈ ಕೋವಿಡ ಪರಿಸ್ಥಿತಿಯಲ್ಲಿ ನಮಗೆ ಬೇಕಾದಂತಹ ಮಾನಸಿಕ ಯೋಗಕ್ಷೇಮದ ಬಗ್ಗೆ ವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಇವರು ಮನಸ್ಸನ್ನು ಶುದ್ಧವಾಗಿ ಹಾಗೂ ಸ್ಥಿರವಾಗಿ ಇರಿಸಿಕೊಳ್ಳುವಂತೆ ಸೂಚಿಸಿದರು. ನಾವು ಯಾವುದೇ ವಿಷಯದ ಬಗ್ಗೆ ಹೆಚ್ಚಾಗಿ ಚಿಂತಿಸದೆ ಜೀವಿಸಬೇಕು. ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಲು ಧ್ಯಾನ, ಪ್ರಾಣಾಯಾಮ, ವ್ಯಾಯಾಮ ಹಾಗೂ ನಮಗೆ ಇಷ್ಟವಾದಂತಹ ಕೆಲಸಗಳನ್ನು ಮಾಡುತ್ತಿರಬೇಕು. ಮುಂದೇನಾಗುತ್ತದೆ ಎಂಬುದನ್ನು ಚಿಂತಿಸದೆ ಆ ಕ್ಷಣದಲ್ಲಿ ಜೀವಿಸಬೇಕು. ಅತಿಯಾದರೆ ಅಮೃತವೂ ವಿಷ ಎನ್ನುವಂತೆ,ಅತಿಯಾದ ಚಿಂತೆಯೂ ನಮ್ಮ ಜೀವನದ ಖುಷಿಯನ್ನು ಕಿತ್ತುಕೊಳ್ಳುತ್ತದೆ.ನಮಗೆ ನಡೆಯುತ್ತಿರುವ ವಿಷಯ ದ ಬಗ್ಗೆ ಗಮನ, ಸ್ಪಷ್ಟತೆ ಹಾಗೂ ಏಕಾಗ್ರತೆ ಇರಬೇಕು ಎಂದು ನುಡಿದರು.  ಸರಿಯಾದ ಉಸಿರಾಟ ಮಾಡುವ ವಿಧಾನವನ್ನು ಪ್ರಾತ್ಯಕ್ಶಿಕೆಯ ಮೂಲಕ ತಿಳಿಸಿಕೊಟ್ಟರು.


ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ, ಕಾರ್ಯಾಗಾರದ ಆಯೋಜಕರಾದ ಸೀಮಾ ಪ್ರಭು ಎಸ್. ಅವರು ಪ್ರಾಸ್ಥಾವಿಕ ಮಾತುಗಳನ್ನಾಡಿ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು.ಇನ್ನೊರ್ವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾವ್ಯಶ್ರೀ  ಧನ್ಯವಾದ ಸಮರ್ಪಿಸಿದರು. ಸ್ವಯಂಸೇವಕಿ ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು