3:41 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ: ಶಾಸಕ ವೇದವ್ಯಾಸ ಕಾಮತ್

01/04/2022, 17:20

ಮಂಗಳೂರು(reporterkarnataka.com)

ಹಿಂದು ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಏನು ಮಾಡಿದ್ದಾರೆ ಎನ್ನುವುದರ ದಾಖಲೆಕೊಡುತ್ತೇನೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆ ಸಂದರ್ಭದಲ್ಲಿ ಸಮಾಜಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. 

ಆರೆಸ್ಸೆಸ್, ವಿಶ್ವ ಹಿಂದೂ ಪರಿಷತ್, ಬಜರಂಗದಳ‌, ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಎಲ್ಲಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಕಾಮತ್, ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ, ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಜನರ ನಡುವೆ ಕೆಲಸ ಮಾಡುತ್ತಿದ್ದರು. ಆದರೆ ಆ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. 

ಬಜರಂಗದಳ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಅಸಹಾಯಕರಿಗೆ ಸಹಾಯ ಮಾಡಿದ್ದಾರೆ. ಕೋವಿಡ್ ಸೋಂಕಿತರ ಶವ ಮುಟ್ಟಲು ಮನೆಯವರು ಹಿಂಜರಿದಂತಹ ಸಂದರ್ಭದಲ್ಲಿ 400ಕ್ಕೂ ಅಧಿಕ ಶವಗಳ ಅಂತ್ಯ ಸಂಸ್ಕಾರ ಮಾಡುವ ಮೂಲಕ ಜಿಲ್ಲಾಡಳಿತದೊಂದಿಗೆ ಕಾರ್ಯ ನಿರತರಾಗಿದ್ದರು. ಯಾರನ್ನೋ ಓಲೈಸಲು ಮಾಜಿ ಮುಖ್ಯಮಂತ್ರಿ‌ ಕುಮಾರಸ್ವಾಮಿಯವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ.

ಮಂಗಳೂರಿನಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತಿದ್ದಾಗ ಆರ್.ಎಸ್.ಎಸ್ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರು ಹೆಲ್ಪ್ ಲೈನ್ ತೆರೆದು ಅವಶ್ಯಕತೆ ಉಳ್ಳವರಿಗೆ ನೆರವಾಗಿದ್ದಾರೆ. ಉಚಿತ ಆಂಬ್ಯುಲೆನ್ಸ್ ಸೇವೆ, ಐಸೋಲೇಷನ್ ಸೆಂಟರ್, ರಕ್ತದ ಅವಶ್ಯಕತೆಯಿರುವಾಗ 2847 ಯುನಿಟ್ ರಕ್ತದ ವ್ಯವಸ್ಥೆ, ತುರ್ತಾಗಿ ಆಕ್ಸಿಜನ್ ಪೂರೈಕೆ, ಸಾವಿರಾರು ಜನರಿಗೆ ಊಟದ‌ ವ್ಯವಸ್ಥೆ, 16 ಸಾವಿರ ಕುಟುಂಬಗಳಿಗೆ ರೇಷನ್ ಕಿಟ್, 552 ಜನರಿಗೆ ಔಷಧ ವಿತರಣೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕೋವಿಡ್ ಸಂಕಷ್ಟದ ಕಾಲದಲ್ಲಿ ಕುಮಾರಸ್ವಾಮಿಯವರು ಹೇಳಿಕೆ, ಪುಕ್ಕಟ್ಟೆ ಸಲಹೆಗಳನ್ನು ಕೊಡುವುದಲ್ಲದೆ ಬೇರೆ ಏನು ಮಾಡಿದ್ದಾರೆ. ಸಂಘಟನೆಯ ಕಾರ್ಯಕರ್ತರು ಹಗಲು ಇರುಳೆನ್ನದೆ ಸಮಾಜದ ನಡುವೆ ಸೇವೆ ಮಾಡಿ ಅನೇಕ ಕಾರ್ಯಕರ್ತರು ಕೋವಿಡ್ ಸೋಂಕಿಗೂ ಒಳಗಾಗಿದ್ದಾರೆ. ಇವೆಲ್ಲದರ ದಾಖಲೆ ಬೇಕಿದ್ದರೆ ಕುಮಾರಸ್ವಾಮಿ ಅವರಿಗೆ ಕೊಡುತ್ತೇವೆ. ಹಾಗೆಯೇ ಕುಮಾರಸ್ವಾಮಿಯವರು ಏನು ಮಾಡಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು