9:36 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳಲು ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯೇ ಶ್ರೀರಕ್ಷೆ: ಶಾಸಕ ಕಾಮತ್

22/06/2021, 09:00

ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. 

ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ‌ ಹಂತದ ಉಚಿತ ಲಸಿಕೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕಾಮತ್, ಅನೇಕ ಸೇವಾ ಸಂಸ್ಥೆಗಳು ಕೋವಿಡ್‌ ಸಂದರ್ಭದಲ್ಲಿ ಜನರಿಗೆ ಉಪಯುಕ್ತವಾಗುವ‌ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಬ್ದಾರಿಯನ್ನು ನಿಭಾಯಿಸಿದೆ. ಆಹಾರ ವಿತರಣೆ, ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಔಷಧಿಗಳ ವಿತರಣೆ ಸೇರಿದಂತೆ ಜನರಿಗೆ ಸಹಕಾರಿಯಾಗುವ ಕೆಲಸದಲ್ಲಿ ಸೇವಾ‌ ಸಂಸ್ಥೆಗಳು ತೊಡಗಿಸಿಕೊಂಡಿವೆ. ಆ ಸಾಲಿನಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಕೆಲಸ ಶ್ಲಾಘನೀಯ ಎಂದರು.

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿಗಳಾದ ರಘುವೀರ್ ಕಾಮತ್ ಮಾತನಾಡಿ, ಸಾಮಾಜಿಕ ಕಳಕಳಿಯುಳ್ಳ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಸದಸ್ಯರು ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಲಸಿಕೆ ವಿತರಿಸುವ ಮೂಲಕ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಅವರ ಕಾರ್ಯಕ್ಕೆ ಯಶಸ್ಸು ದಕ್ಕಲಿ ಎಂದು ಹಾರೈಸಿದರು.

ಬಳಿಕ ಮಾತನಾಡಿದ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಅಧ್ಯಕ್ಷರಾದ ವರುಣ್ ರಾಜ್ ಅಂಬಟ್, ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಒದಗಿಸುವ  ನಿಟ್ಟಿನಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್ ಸ್ಥಾಪಿಸಲಾಗಿತ್ತು. ಇಂದು ಸದಸ್ಯರ ಸಂಖ್ಯೆಯಲ್ಲಿಯೂ ಕೂಡ ಹೆಚ್ಚಳವಾಗಿದೆ. ಈ ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಊಟದ‌ ವ್ಯವಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಕೋವಿಡ್ ಲಸಿಕೆ ಖರೀದಿಸಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಹಂಚಲು ತೀರ್ಮಾನಿಸಲಾಗಿತ್ತು. ಇಂದು 210 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಸ್ಥಳೀಯ ಮನಪಾ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಅಡ್ವಕೇಟ್ ರಂಜಿನಿ ಕಾಮತ್ ಹಾಗೂ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು