9:49 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೋವಿಡ್ ಸೋಂಕಿತರ ಪ್ರಮಾಣ ತಗ್ಗಿಸಲು  ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚನೆ

16/06/2021, 10:35

ಮಂಗಳೂರು (reporterkarnataka news): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತ್ತಿಯಲ್ಲಿ ಪ್ರಸ್ತುತ ಶೇ.17ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚಿಸಲಾಗಿದೆ.

ಸೋಂಕಿನ ಲಕ್ಷಣಗಳಿರುವ ವ್ಯಕ್ತಿಗಳು ತಪಾಸಣೆಗಾಗಿ ಸುತ್ತಾಡುತ್ತಿರುವುದರಿಂದ ಮತ್ತಷ್ಟು ಸೋಂಕು ಹರಡುವ ಸಾಧ್ಯತೆಗಳಿರುವುದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಪತ್ತೆ ಹಚ್ಚಲಾಗುವ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡವನ್ನು ರಚಿಸಲಾಗಿದೆ.

ಈ ತಂಡವು ಸೋಂಕಿನ ಲಕ್ಷಣಗಳುಳ್ಳ ವ್ಯಕ್ತಿಗಳ ಸ್ಥಳಕ್ಕೆ ಬಂದು ಪರೀಕ್ಷೆ ಮಾಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಲು ಪಾಲಿಕೆ ವತಿಯಿಂದ ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ  ಎಂಬ ಪರಿಕಲ್ಪನೆಯಲ್ಲಿ ಪ್ರತ್ಯೇಕವಾದ ದೂ ಸಂ: 0824-2455674 ನ್ನು ನಿಗಧದಿಪಡಿಸಿಕೊಂಡು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.ಈ ಸಹಾಯವಾಣಿ ಕೇಂದ್ರವು ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯಾಚರಿಸಲಿದೆ. 

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕಾರ್ಯಚರಣೆಯನ್ನು ನಡೆಸಲಾಗಿದ್ದು, ಜೂನ್ 11ರಂದು ಒಟ್ಟು 20 ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿದ್ದು, ರೂ. 16,500 ದಂಡವನ್ನು ವಿಧಿಸಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು