ಇತ್ತೀಚಿನ ಸುದ್ದಿ
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ ಪ್ರತಿಭಟನೆ
04/03/2026, 12:17
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಿಂದ ತೀರ್ಥಹಳ್ಳಿಗೆ ಹೋಗುವ ಮಾರ್ಗದ ಶಿವಪುರದ ರಸ್ತೆ ಬಳಿ ನಾಲ್ಕು ಚೀಲದಲ್ಲಿ ದನದ ಕಳೇಬರಹದ ಅವಶೇಷ ಪತ್ತೆಯಾಗಿದ್ದು, ಭಜರಂಗದ ದಳದ ಕಾರ್ಯಕರ್ತರು ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತು.



ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕಾಫಿನಾಡಲ್ಲಿ ಎಗ್ಗಿಲ್ಲದೆ ಗೋಹತ್ಯೆ ಪ್ರಕರಣಗಳು ಮುಂದುವರೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.
ಗೋವಿನ ಕಳೆಬರಹ ಪತ್ತೆಯಾದ ಹಿನ್ನಲೆ ಭಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ ತಡೆದು ಗೋಹತ್ಯಾ ಕಿಡಿಗೇಡಿಗಳನ್ನ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿದರು. ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ ಭಜರಂಗದಳ ಕಾರ್ಯಕರ್ತರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ. ವಿನಯ್ ಶಿವಪುರ ಸೇರಿ ಇನ್ನಿತರರ ಮೇಲೆ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












