1:45 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಗೋಮಾತ ಗೌರವ ದಿನ: ವಿಶ್ವ ಹಿಂದೂ ಪರಿಷತ್ ವತಿಯಿಂದ ಅಭಿಯಾನ; ಸರಕಾರಕ್ಕೆ ಮನವಿ ಸಲ್ಲಿಕೆ

27/04/2026, 23:17

ಎಚ್ ಡಿ ಕೋಟೆ(reporterkarnataka.com): ಏಪ್ರಿಲ್ 27 ಗೋಮಾತಾ ಗೌರವ ದಿನವಾದ ಇಂದು ಗೋವು ರಕ್ಷಣೆಗೆ ಸಂಬಂಧಿಸಿದ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಎಚ್ ಡಿ ಕೋಟೆ ತಾಲೂಕು ಘಟಕದ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಹಸೀಲ್ದಾರ್ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.
ಹೆಗ್ಗಡದೇವ ಕೋಟೆ ತಾಲೂಕು ಕಚೇರಿಗೆ ತೆರಳಿದ ವಿಶ್ವ ಹಿಂದೂ ಪರಿಷತ್ ಮುಖಂಡರುಗಳು ತಹಸೀಲ್ದಾರ್ ಶ್ರೀನಿವಾಸ್ ಅವರ ಮುಖಾಂತರ ಭಾರತದ ಸನ್ಮಾನ್ಯ ರಾಷ್ಟ್ರಪತಿಗಳು, ಸನ್ಮಾನ್ಯ ಪ್ರಧಾನ ಮಂತ್ರಿಗಳು ಸೇರಿದಂತೆ ಕರ್ನಾಟಕ ಸರ್ಕಾರದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಗೋಮಾತೆಗೆ ರಾಷ್ಟ್ರೀಯ ತಾಯಿ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಅಥವಾ ರಾಷ್ಟ್ರೀಯ ಗುರುತಿನ ಗೌರವಾನ್ವಿತ ಸ್ಥಾನವನ್ನು ನೀಡಬೇಕು, ಗೋವಿನ ಸೇವೆಗಾಗಿ ಕೇಂದ್ರ ಕಾನೂನು ರೂಪಿಸಬೇಕು ಭಾರತದಲ್ಲಿ ಗೋ ಹತ್ಯೆಯನ್ನು ಸಂಪೂರ್ಣವಾಗಿ ಕೊನೆಗಾಣಿಸಬೇಕು ಸೇರಿದಂತೆ ಗೋ ರಕ್ಷಣೆಗೆ ಸಂಬಂಧಿಸಿದಂತೆ ಅನುದಾನ ನೀಡುವುದು ಗೋಶಾಲೆಗಳನ್ನು ತೆರೆದು ಮೇವು ಒದಗಿಸುವುದು ಕಾನೂನು ಮತ್ತು ರಕ್ಷಣೆ ಒದಗಿಸುವುದು, ಗೋವು ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದು, ಸರ್ಕಾರಿ ಮತ್ತು ಸರ್ಕಾರೇತರ ಶಾಲಾ ಕಾಲೇಜುಗಳಲ್ಲಿ ದೇಸಿ ಹಸುಗಳ ವೈಜ್ಞಾನಿಕ, ಆರ್ಥಿಕ ಮತ್ತು ಧಾರ್ಮಿಕ ಮಹತ್ವವು ಕಡ್ಡಾಯ ಅಧ್ಯಯನ ವಿಷಯಗಳಾಗಿರಬೇಕು ಎಂಬ ಹತ್ತು ಹಲವು ಬೇಡಿಕೆ ಹಾಗೂ ವಿಷಯಗಳನ್ನು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಮನವಿ ಪತ್ರ ಸ್ವೀಕರಿಸಿದ ತಹಸೀಲ್ದಾರ್ ಶಿವಕುಮಾರ್ ಅವರು ಮಾತನಾಡಿ ತಮ್ಮ ಮನವಿ ಪತ್ರಗಳನ್ನು ತಕ್ಷಣವೇ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಲುಪಿಸಲಾಗುವುದು ಎಂದರು.
ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಆನಂದ ಕುಮಾರಸ್ವಾಮಿ, ಉಪಾಧ್ಯಕ್ಷ ಸುಧಾಕರ್, ಮಾತೃ ಶಕ್ತಿ ಪ್ರಮುಖ್ ಶ್ರೀಮತಿ ಲಲಿತಾ, ಬಜರಂಗದಳದ ಸಂಯೋಜಕ ನಾಗೇಶ್ ಸಹ ಸಂಯೋಜಕ ಸಂತೋಷ್, ಧರ್ಮ ಪ್ರಸಾರಕ ಮಹದೇವಪ್ಪ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಸೇರಿದಂತೆ ಮುಖಂಡರುಗಳಾದ ಸತ್ಯನಾರಾಯಣ, ನಾಗ ಪುರುಷೋತ್ತಮ್ ಪಂಡಿತ್, ಗಿರೀಶ್ ರಾಜೆ ಅರಸ್, ಕೆಜಿ ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು