2:19 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕೋಝಿಕ್ಕೋಡ್‍: ಶಬರಿಮಲೆ ಪ್ರವೇಶಿಸಿದ್ದ ಬಿಂದು ಮೇಲೆ ನಡು ರಸ್ತೆಯಲ್ಲಿ ದಾಳಿ;  ಆರೋಪಿ ಬಂಧನ

07/01/2022, 01:23

ತಿರುವನಂತಪುರಂ(reporterkarnataka.com): ಶಬರಿಮಲೆ ದೇಗುಲ ಪ್ರವೇಶಿಸಿದ ಮೊದಲ ಮಹಿಳೆ ಬಿಂದು ಮೇಲೆ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ.

2018 ರಲ್ಲಿ ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ ಮೊದಲ ಮಹಿಳೆ ದಲಿತ ಕಾರ್ಯಕರ್ತೆ ಬಿಂದು ಅಮ್ಮಿಣಿ ಅವರ ಮೇಲೆ ಉತ್ತರ ಕೇರಳದ ಕೋಝಿಕ್ಕೋಡ್‍ನಲ್ಲಿ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೋಹನ್ ದಾಸ್ ಬಂಧಿತ ಆರೋಪಿ. ಪೊಲೀಸ್ ಠಾಣೆಗೆ ಶರಣಾಗಲು ತೆರಳುತ್ತಿದ್ದ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವೇಳೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಅಮ್ಮಿಣಿ ಅವರು ಪೊಲೀಸರಿಗೆ ದೂರು ನೀಡಿದ್ದು, ಸಮುದ್ರತೀರದಲ್ಲಿ RSS ಬೆಂಬಲಿತ ವ್ಯಕ್ತಿಯೊಬ್ಬ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ರಸ್ತೆಯಲ್ಲಿ ನಾನು ನೆಲಕ್ಕೆ ಬೀಳುವವರೆಗೂ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದಾಖಲಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಅಮ್ಮಿಣಿ ಅವರು, ಇದು ನನ್ನ ಮೇಲೆ ಮೊದಲ ಬಾರಿ ನಡೆಯುತ್ತಿರುವ ದಾಳಿಯಲ್ಲ. ನನ್ನನ್ನು ಹಿಂದೂ ಸಂಘಟನೆಗಳು ಯಾವಾಗಲೂ ಗುರಿಯಾಗಿಸಿಕೊಂಡಿದೆ. ಕಳೆದ ತಿಂಗಳು ಆಟೋ ಚಾಲಕನೊಬ್ಬ ನನ್ನ ಮೇಲೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದ. ಈ ಪರಿಣಾಮ ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೆ ಎಂದಿದ್ದಾರೆ.

ವಕೀಲರೊಬ್ಬರನ್ನು ಸಂಪರ್ಕಿಸಲು ನಾನು ಸಮುದ್ರತೀರಕ್ಕೆ ಬಂದಿದ್ದೆ. ಆದರೆ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ಬಂದು ನನ್ನ ಬೈಕ್ ಅನ್ನು ತಡೆದಿದ್ದು, ನನ್ನ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದ. ಸ್ಥಳದಲ್ಲಿದ್ದ ಜನರು ಬಂದಾಗ ಆತ ಅಲ್ಲಿಂದ ಓಡಿ ಹೋದ. ನನ್ನ ಮೇಲೆ ಬೇಕೆಂದು ಈ ದಾಳಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ದಾಳಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅಮ್ಮಣಿ ಅವರಿಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ನಂತರ ಅದನ್ನು ಹಿಂಪಡೆಯಲಾಯಿತು.
ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳಾ ಭಕ್ತರು ಪ್ರವೇಶ ಪಡೆಯಬಹುದು ಎಂದು ಆದೇಶ ನೀಡಿದ ಹಿನ್ನೆಲೆಯಲ್ಲಿ 2 ಜನವರಿ 2019 ರಂದು ಮೊದಲ ಬಾರಿಗೆ ಬಿಂದು ಅಮ್ಮಣಿ ಅವರು ದೇವಾಲಯವನ್ನು ಪ್ರವೇಶಿಸಿದ್ದರು. ಮಹಿಳೆಯರು ದೇವಾಲಯ ಪ್ರವೇಶಿಸಿದ ಕೆಲವೇ ಗಂಟೆಗಳಲ್ಲಿ ದೇವಾಲಯದ ಜಾಗವು ಯುದ್ಧರಂಗವಾಗಿ ಮಾರ್ಪಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು