8:23 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕ್ರೆಡೈಯಿಂದ ಮಂಗಳೂರಿನಲ್ಲಿ ಮಾ.9 ಮತ್ತು 10ರಂದು ಎರಡು ದಿನಗಳ ಬೃಹತ್ ‘ರಿಯಾಲ್ಟಿ ಎಕ್ಸ್ ಪೋ’: ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯ

07/12/2023, 23:11

ಮಂಗಳೂರು(reporterkarnataka.com): ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್‌ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 50ಕ್ಕೂ ಅಧಿಕ ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲ ಸೌಲಭ್ಯಗಳು ದೊರೆಯುವಂತೆ ಎಕ್ಸ್‌ಪೋದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಲಕ್ಸುರಿ ಅಪಾರ್ಟ್‌ಮೆಂಟ್‌ಗಳು, ಎಲೆಕ್ಟ್ಪಾನಿಕ್ಸ್ ಉತ್ಪನ್ನಗಳು, ವಸತಿ, ಬ್ಯಾಂಕ್, ಕಾರ್ ಡೀಲರ್‍ಸ್ ಸೇರಿದಂತೆ ವಿವಿಧ ಸಂಸ್ಥೆಗಳು ಎಕ್ಸ್ ಪೋದಲ್ಲಿ ಭಾಗವಹಿಸಲಿವೆ ಎಂದವರು ಹೇಳಿದರು.
ಇದೇ ಸಂದರ್ಭದಲ್ಲಿ ಕ್ರೆಡೈ ಸಂಸ್ಥೆಯ ಅಧ್ಯಕ್ಷ ವಿನೋದ್ ಪಿಂಟೋ ಅವರು ಮಾತಾನಾಡಿ
ಇತ್ತೀಚೆಗೆ, ಬಿಲ್ಡರ್ ಸಂಸ್ಥೆಯೊಂದರ ಕಟ್ಟಡದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಂಬಂಧಿಸಿದ ಪ್ರಕರಣದಲ್ಲಿ ಗ್ರಾಹಕರ ವೇದಿಕೆಯು ನೀಡಿದ ತೀರ್ಪಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದರು.
ಮಂಗಳೂರಿನ ಕಟ್ಟಡ ನಿಯಮಾವಳಿ ಪ್ರಕಾರ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದರೂ, ತನಗೆ ನಿಗದಿತ ಕಾರ್ ಪಾರ್ಕಿಂಗ್ ಸ್ಲಾಟ್ ನಿಗದಿಪಡಿಸಿಲ್ಲ ಎಂದು ದೂರುದಾರರು ಆರಂಭಿಕ ದೂರು ನೀಡಿ ಪ್ರಸಕ್ತ ನೀಡಿರುವ ಆವರಣದೊಳಗೆ ಮುಚ್ಚಿದ ಪಾರ್ಕಿಂಗ್ (ತಗಡು ಮಾಡು) ಮಾದರಿಯ ಪಾರ್ಕಿಂಗ್ ಬೇಡ, ತನಗೆ ಕಾಂಕ್ರೀಟ್ ಕಟ್ಟಡದ ಕೆಳಗೆಯೆ ಪಾರ್ಕಿಂಗ್ ಸ್ಲಾಟ್ ಬೇಕು ಎಂದು ಹೇಳಿದ್ದರು. ಆದರೆ ಸದ್ರಿ ಕಟ್ಟಡವು ಈಗಾಗಲೇ ಮಾರಾಟ ವಾಗಿದ್ದು, ಪ್ರಸಕ್ತ ಸನ್ನಿವೇಶದಲ್ಲಿ ಬದಲಾವಣೆ ಆಸಾಧ್ಯವಾಗಿತ್ತು. ಈ ಸಮಸ್ಯೆಯ ಬಗ್ಗೆ ದೂರುದಾರ ವ್ಯಕ್ತಿಯ ಬಳಿ ಸಾಕಷ್ಟು ಬಾರಿ ಸಂಧಾನ ನಡೆಸಿದರು ಪರಿಹಾರ ಸಾಧ್ಯವಾಗಿರಲಿಲ್ಲ. ಈ ನಡುವೆ ಜಿಲ್ಲಾ ಗ್ರಾಹಕ ವೇದಿಕೆ ದೂರುದಾರರ ಪರವಾಗಿ ತೀರ್ಪು ನೀಡಿದೆ. ಮುಂದೆ ರಾಜ್ಯ ವೇದಿಕೆಯಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕ್ರೆಡೈ ಕಾರ್ಯದರ್ಶಿ ಗುರು ಎಂ. ರಾವ್, ಉಪಾಧ್ಯಕ್ಷ ಪ್ರಶಾಂತ್ ಸನಿಲ್, ಜತೆ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಭಂಡಾರಿ, ಕೋಶಾಧಿಕಾರಿ ಕರುಣಾಕರಣ್, ಪ್ರಮುಖರಾದ ರೋಹನ್ ಮೊಂತೇರೊ, ನವೀನ್ ಕಾರ್ಡೋಜ, ಧೀರಜ್ ಅಮೀನ್, ಆವೊಲಾನ್ ಪತ್ರಾವೊ, ವಿಲಿಯಂ ಡಿಸೋಜ, ರವೀಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು